ಕಾಪು: ತಾಲೂಕಿನ ಕಾಪು ಪುರಸಭಾ ಚುನಾವಣೆ ಡಿಸೆಂಬರ್ ತಿಂಗಳ ಕೊನೆಗೆ ನಡೆಯಲಿರುವುದರಿಂದ ಎಸ್ಡಿಪಿಐ ಪಕ್ಷವು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿ ಅಧಿಕ್ರತ ಅಭ್ಯರ್ಥಿಯನ್ನು ಘೋಷಿಸಿದೆ.
ಕಾಪು ಕೊಂಬಗುಡ್ಡೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಅಧಿಕ್ರತ ಅಭ್ಯರ್ಥಿಗಳ ಪ್ರಥಮ ಪಟ್ಟಿಯ ಹೆಸರನ್ನು ಘೋಷಿಸಿದರು.
ಅಭ್ಯರ್ಥಿ ಘೋಷಣೆ ಮಾಡಿ ಮಾತಾಡಿದ ಶಾಫಿ ಬೆಳ್ಳಾರೆಯವರು ಓಟು ಪಡೆಯುವಾಗ ಕಾಂಗ್ರೆಸ್ ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳುವ ಈ ಸಂದರ್ಭದಲ್ಲಿ ಜನತೆ ಪ್ರಜ್ಙಾವಂತಿಕೆಯಿಂದ ಮತ ಚಲಾಯಿಸಲು ಮತ್ತು ಈ ದೇಶದ ಅಲ್ಪಸಂಖ್ಯಾತ,ದಲಿತ ಸಮುದಾಯದಕ್ಕೆ ಕಾಂಗ್ರೆಸ್ ನಡೆಸಿದ ಅನ್ಯಾಯಗಳನ್ನು ಮರೆಯಬಾರದು ಎಂದು ತಿಳಿಹೇಳಿದರು.ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಮಾತನಾಡಿ ಅಲ್ಪಸಂಖ್ಯಾತರು ಚುನಾವಣೆಗೆ ನಿಂತರೆ ಯಾರೂ ಮತ ಹಾಕುವುದಿಲ್ಲ ಎಂಬ ಕಾಂಗ್ರೆಸ್ ನಾಯಕರೋರ್ವರ ಮಾತನ್ನು ಪ್ರಸ್ತಾಪಿಸಿ ಅದೇ ಅಲ್ಪಸಂಖ್ಯಾತರ ಮತಗಳು ನೀವುಗಳು ಗೆಲ್ಲಲು ಬೇಕಾ ಎಂದು ಪ್ರಶ್ನಿಸಿದರು,ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಲೀ ರವರು ಸಂದರ್ಭೋಚಿತವಾಗಿ ಮಾತನಾಡಿದರು.ಕಾರ್ಯಕ್ರದ ಅಧ್ಯಕ್ಷತೆಯನ್ನು ಕಾಪು ವಿಧಾನ ಸಭಾ ಅಧ್ಯಕ್ಷ ಹನೀಫ್ ಮೂಳೂರ್ ವಹಿಸಿದ್ದರು.ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್,ಫಹೀಮ್, ಇಬ್ರಾಹಿಂ ಉಚ್ಚಿಲ ಉಪಸ್ಥಿತರಿದ್ದರು.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…