ಕಾಪು: ತಾಲೂಕಿನ ಕಾಪು ಪುರಸಭಾ ಚುನಾವಣೆ ಡಿಸೆಂಬರ್ ತಿಂಗಳ ಕೊನೆಗೆ ನಡೆಯಲಿರುವುದರಿಂದ ಎಸ್ಡಿಪಿಐ ಪಕ್ಷವು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿ ಅಧಿಕ್ರತ ಅಭ್ಯರ್ಥಿಯನ್ನು ಘೋಷಿಸಿದೆ.
ಕಾಪು ಕೊಂಬಗುಡ್ಡೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಅಧಿಕ್ರತ ಅಭ್ಯರ್ಥಿಗಳ ಪ್ರಥಮ ಪಟ್ಟಿಯ ಹೆಸರನ್ನು ಘೋಷಿಸಿದರು.
ಅಭ್ಯರ್ಥಿ ಘೋಷಣೆ ಮಾಡಿ ಮಾತಾಡಿದ ಶಾಫಿ ಬೆಳ್ಳಾರೆಯವರು ಓಟು ಪಡೆಯುವಾಗ ಕಾಂಗ್ರೆಸ್ ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳುವ ಈ ಸಂದರ್ಭದಲ್ಲಿ ಜನತೆ ಪ್ರಜ್ಙಾವಂತಿಕೆಯಿಂದ ಮತ ಚಲಾಯಿಸಲು ಮತ್ತು ಈ ದೇಶದ ಅಲ್ಪಸಂಖ್ಯಾತ,ದಲಿತ ಸಮುದಾಯದಕ್ಕೆ ಕಾಂಗ್ರೆಸ್ ನಡೆಸಿದ ಅನ್ಯಾಯಗಳನ್ನು ಮರೆಯಬಾರದು ಎಂದು ತಿಳಿಹೇಳಿದರು.ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಮಾತನಾಡಿ ಅಲ್ಪಸಂಖ್ಯಾತರು ಚುನಾವಣೆಗೆ ನಿಂತರೆ ಯಾರೂ ಮತ ಹಾಕುವುದಿಲ್ಲ ಎಂಬ ಕಾಂಗ್ರೆಸ್ ನಾಯಕರೋರ್ವರ ಮಾತನ್ನು ಪ್ರಸ್ತಾಪಿಸಿ ಅದೇ ಅಲ್ಪಸಂಖ್ಯಾತರ ಮತಗಳು ನೀವುಗಳು ಗೆಲ್ಲಲು ಬೇಕಾ ಎಂದು ಪ್ರಶ್ನಿಸಿದರು,ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಲೀ ರವರು ಸಂದರ್ಭೋಚಿತವಾಗಿ ಮಾತನಾಡಿದರು.ಕಾರ್ಯಕ್ರದ ಅಧ್ಯಕ್ಷತೆಯನ್ನು ಕಾಪು ವಿಧಾನ ಸಭಾ ಅಧ್ಯಕ್ಷ ಹನೀಫ್ ಮೂಳೂರ್ ವಹಿಸಿದ್ದರು.ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್,ಫಹೀಮ್, ಇಬ್ರಾಹಿಂ ಉಚ್ಚಿಲ ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…