ಕಾಪು:ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಜಾತಿವಾರು ಪೈಕಿ ಟಿಕೆಟ್ ನೀಡುವಲ್ಲಿ ಯಶಸ್ವಿಯಾಗಿಲ್ಲ ಎಂಬ ಮಾತು ಕೇಳಿ ಬರುತ್ತಿದೆ ಮಾತ್ರವಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಬಿಸಿ ಬಿಸಿ ಚರ್ಚೆಗೆ ಅನುವು ಮಾಡಿಕೊಟ್ಟಿದೆ.
23 ವಾರ್ಡಿನ ಪೈಕಿ ಬಿಲ್ಲವ , ದೇವಾಡಿಗ, ಬಂಟ, ಹಾಗೂ ಇತರೆ ಜಾತಿಯ ಮುಖಂಡರಿಗೆ ಬಿಜೆಪಿ ಟಿಕೆಟ್ ನೀಡುವಲ್ಲಿ ಯಶಸ್ವಿಯಾದರೆ ಭಾಜಪದ ಮತ್ತು ಹಿಂದುತ್ವದ ಕಟ್ಟರ್ ಮತಬ್ಯಾಂಕ್ ಅನಿಸಿಕೊಂಡಿರುವ ಜಿ.ಎಸ್.ಬಿ ಹಾಗೂ ಬ್ರಾಹ್ಮಣ ೨ ಸಮುದಾಯವನ್ನು ಕಡೆಗಣಿಸಿದರು ಅನ್ನುವ ಮಾತು ಕೇಳಿ ಬರುತ್ತಿದೆ. ಕಾಪು ಪೇಟೆ, ಭಾರತ್ ನಗರ, ಜನಾರ್ಧನ ದೇವಸ್ಥಾನ , ಕೊಪ್ಪಲಂಗಡಿ ವಾರ್ಡಿನಲ್ಲಿ ಈ ಎರಡು ಸಮುದಾಯದ ನಿರ್ಣಾಯಕ ಮತಗಳಿದ್ದರೂ ಯಾವ ಕಾರಣಕ್ಕಾಗಿ ದೂರ ಇಟ್ಟರು ಅನ್ನುವ ಚರ್ಚೆ ಆರಂಭವಾಗಿದೆ.
ಸರಿ ಸುಮಾರು 400-450 ಜಿ.ಎಸ್.ಬಿ ಸಮುದಾಯ ಮತ್ತು 400-425 ಬ್ರಾಹ್ಮಣ ಸಮಾಜದ ಮತಗಳನ್ನು ಹೊಂದಿರುವ ಈ ಸಮುದಾಯಗಳಿಗೆ ಬಿಜೆಪಿ ಪಾರ್ಟಿ ಟಿಕೆಟ್ ನೀಡುವಲ್ಲಿ ಹಿಂದೆ ಸರಿದಿರುವುದು ಅಚ್ಚರಿ ಉಂಟು ಮಾಡಿದೆ.ಯಾವುದೇ ಲೆಕ್ಕಚಾರ ಹಾಕಿ ತಾಳೆ ಮಾಡಿನೋಡಿದರು ಎರಡು ಸಮುದಾಯದಿಂದ ಶೇಕಾಡ ೯೯% ಹಿಂದುತ್ವದ ಕಟ್ಟರ್ ಮತಗಳಿರುವ ಸಮುದಾಯಗಳು , ಕಳೆದ ಚುನಾವಣೆಯಲ್ಲಿಯೂ ಕೂಡ ಬಿಜೆಪಿ ಈ ಎರಡು ಜಾತಿಯ ಮುಖಂಡರಿಗೆ ಟಿಕೆಟ್ ನೀಡುವಲ್ಲಿ ವಿಫಲವಾಗಿತ್ತು ಆದರೇ ಈ ಬಾರಿಯಾದರೂ ಅವಕಾಶ ಸಿಗಬಹುದೆಂದು ನಂಬಿದ್ದ ಎರಡು ಸಮುದಾಯಕ್ಕೆ ನಿರಾಶೆ ಉಂಟುಮಾಡಿದೆ ಅನ್ನುವುದು ಸದ್ಯದ ಸುದ್ದಿ.
ನಾಮನಿರ್ದೇಶನ ಸದಸ್ಯ ಮಾಡಿತ್ತು ಕಾಂಗ್ರೇಸ್
ಮತದಾರರನ್ನು ಮತ್ತು ಜಾತಿವಾರು ಪರಿಗಣನೆಯಲ್ಲಿ ಕಾಂಗ್ರೇಸ್ ಪಕ್ಷ ಕಳೆದ ಚುನಾವಣೆಯಲ್ಲಿ ಸಫಲತೆಯನ್ನು ಕಂಡುಕೊAಡ್ಡಿದ್ದು ಮಾತ್ರವಲ್ಲದೆ ಅಧಿಕಾರ ಚುಕ್ಕಾಣಿ ಹಿಡಿಯುವ ಸಂಧರ್ಭದಲ್ಲಿ ಜಿ.ಎಸ್.ಬಿ ಸಮುದಾಯದ ಹರೀಶ್ ಕೆ ನಾಯಕ್ರನ್ನು ನಾಮನಿರ್ದೇಶನ ಸದಸ್ಯನನ್ನಾಗಿ ಆಯ್ಕೆ ಮಾಡಿ ಕಾಂಗ್ರೇಸ್ ಪಕ್ಷ ಜೆ.ಎಸ್.ಬಿ ಸಮಾಜದ ಡ್ಯಾಮೇಜ್ ಕಂಟ್ರೋಲ್ ಮಾಡುವಲ್ಲಿ ಯಶಸ್ವಿಯಾಗಿತ್ತು . ಮಾತ್ರವಲ್ಲದೆ ಅವರಿಗೂ ಸ್ಥಾನಮಾನ ಕೊಡುವಲ್ಲಿ ಯಶಸ್ವಿಯಾಗಿತ್ತು. ಆದರೇ ಬಿಜೆಪಿ ಆಡಳಿತ ಸಮಯದಲ್ಲಿ ಅಧಿಕಾರ ಪಡೆದುಕೊಂಡರೂ ಈ ಎರಡು ಸಮುದಾಯದಿಂದ ಕಡೇ ಪಕ್ಷ ನಾಮನಿರ್ದೇಶನ ಸದಸ್ಯ ಮಾಡುವಲ್ಲಿ ಕೂಡ ವಿಫಲತೆಯನ್ನು ಕಂಡಿದೆ ಅನ್ನುವುದು ಸತ್ಯವಾದ ವಿಚಾರ.
ಈ ಎಲ್ಲಾ ಅಂಶಗಳ ನಡುವೆ ಈ ಬಾರಿಯು ಕೂಡ ಕಾಂಗ್ರೇಸ್ ಭಾರತನಗರ ವಾರ್ಡಿನಲ್ಲಿ ಹರೀಶ್ ನಾಯಕ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ಆರಂಭವಾಗಿದ್ದು ಮಾತ್ರವಲ್ಲಿ ಕಡೇ ಕ್ಷಣದಲ್ಲಿ ಘೋಷಣೆ ಮಾಡುವ ಸಾಧ್ಯತೆಯೂ ಇದೆ ಅನ್ನುವ ಮಾತು ಕಾಂಗ್ರೇಸ್ ವಲಯದಲ್ಲಿ ಕೇಳಿ ಬರುತ್ತಿದೆ.ಕಾಪು ಪೇಟೆ ಮತ್ತು ಭಾರತ್ ನಗರ ಹಾಗೂ ಜನಾರ್ಧನ ದೇವಸ್ಥಾನ ವಾರ್ಡಿನಲ್ಲಿ ಈ ಎರಡು ಸಮುದಾಯದ ಮತಗಳು ಅತ್ಯಂತ ನಿರ್ಣಾಯಕ ಎಂಬುದು ಸರ್ವೆ ಸಾಮಾನ್ಯವಾಗಿ ತಿಳಿದಿರುವ ವಿಚಾರ ಆದರೂ ಬಿಜೆಪಿ ಯಾಕೇ ಕಡೆಗಣಿಸಿತು ಎಂಬುದು ಯಕ್ಷಪ್ರಶ್ನೆಯಾಗಿದೆ.
ಬ್ಯುರೋ ರಿಪೋರ್ಟ್
ವಿಶ್ವನ್ಯೂಸ್೨೪
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…