Featured

ಕಾಪು ಪುರಸಭಾ ಚುನಾವಣೆ : ಜೆಡಿಎಸ್ ಪಕ್ಷದ ವತಿಯಿಂದ  ಸಮಾಲೋಚನ ಸಭೆ – Vishwanews24

ಕಾಪು ಪುರಸಭಾ ಚುನಾವಣೆ : ಜೆಡಿಎಸ್ ಪಕ್ಷದ ವತಿಯಿಂದ  ಸಮಾಲೋಚನ ಸಭೆ – Vishwanews24

ಕಾಪು ಪುರಸಭಾ ಚುನಾವಣೆಯ ತಯಾರಿ ಬಗ್ಗೆ ಜನತಾದಳ (ಜಾತ್ಯತೀತ)ಪಕ್ಷದ ವತಿಯಿಂದ  ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಕಾಪು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಶ್ರೀ ಇಕ್ಬಾಲ್ ಅತ್ರಾಡಿಯವರ ಅಧ್ಯಕ್ಷತೆಯಲ್ಲಿ  ಪುರಸಭಾ ವ್ಯಾಪ್ತಿಯ ಚುನಾವಣೆ ತಯಾರಿ ಬಗ್ಗೆ ಕಾಪು ಮಹಾಬಲಮಾಲ್ ನಲ್ಲಿರುವ ಪಕ್ಷ ಕಚೇರಿಯಲ್ಲಿ ದಿನಾಂಕ 03.12.2021ರಂದು ಸಭೆ ಜರಗಿತು.
ಶ್ರೀ ಎಚ್ ಡಿ ದೇವೇಗೌಡರು ಪ್ರಧಾನಮಂತ್ರಿಯಾಗಿ ಮತ್ತು ಶ್ರೀಎಚ್ ಡಿ ಕುಮಾರಸ್ವಾಮಿಯವರು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ  ಮಾಡಿದಂತಹ ಕೆಲಸಗಳನ್ನು ಜನರಿಗೆ ತಿಳಿಸುವುದು  ಹಾಗೂ ಕಾಪು ಪುರಸಭೆ ಮತ್ತು ಪ್ರಾಧಿಕಾರ ದಿಂದಾಗಿ ಆದ ತೊಂದರೆಗಳು, ಅದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಇನ್ನು ಮುಂದಿನ ದಿನಗಳಲ್ಲಿ  ನಮ್ಮ ಅಭ್ಯರ್ಥಿಗಳನ್ನು ಪುರಸಭೆಗೆ ಆಯ್ಕೆ ಮಾಡುವಲ್ಲಿ, ಜನರು ಸಹಕಾರ ಕೊಟ್ಟರೆ, ಪುರಸಭೆಯಲ್ಲಿ ಏನು ತೊಂದರೆ ಆಗುತ್ತಿತ್ತು ಅದನ್ನೆಲ್ಲ ನಿವಾರಿಸುವಲ್ಲಿ ಖಂಡಿತವಾಗಿ ಯಶಸ್ವಿಯಾಗುತ್ತೇವೆ. ನಮ್ಮನ್ನು ಬೆಂಬಲಿಸಿ ಎಂದು ಜನರಲ್ಲಿ ಸಹಕಾರವನ್ನು ಕೋರಬೇಕು,  ಎಲ್ಲಾ ಕಾರ್ಯಕರ್ತರು, ನಾಯಕರು ಒಗ್ಗಟ್ಟಿನಿಂದ ದುಡಿದು ಹೆಚ್ಚಿನ ಸಂಖ್ಯೆಯಲ್ಲಿ ಪುರಸಭಾ ಸದಸ್ಯರು ಆಯ್ಕೆಯಾಗುವಲ್ಲಿ ಪ್ರಯತ್ನಿಸಬೇಕು ಹಾಗೂ ಪುರಸಭಾ ಚುನಾವಣೆ ತಂತ್ರಗಾರಿಕೆ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಸಭೆಗೆ ನೀಡಿದರು.
ಕಾರ್ಯಾಧ್ಯಕ್ಷರಾದ ಶ್ರೀ ವಾಸುದೇವ ರಾವ್ ರವರು  ಸಭೆಯನ್ನುದ್ದೇಶಿಸಿ ಮಾತನಾಡಿದರು.ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ವೀಕ್ಷಕರಾದ ಸುಧಾಕರ್ ಶೆಟ್ಟಿ, ಉದಯ ಹೆಗ್ಡೆ, ಎಂ ಟಿ ವೆಂಕಟೇಶ್, ರಾಜು ಆರ್ ಪುತ್ರನ್, ಅಬ್ದುಲ್ ಹಮೀದ್ ಯೂಸುಫ್,ತಬಸುಮ್, ಉದಯ ಆರ್ ಶೆಟ್ಟಿ,ಶ್ರೀನಾಥ,ಅರವಿಂದ ಶೆಟ್ಟಿ,ರಶೀದ್,ಅಲ್ತಾಫ್,ಶಂಸುದ್ದೀನ್, ಸನವರ್, ಪಕ್ಷ ಕಾರ್ಯಕರ್ತರು ಉಪಸ್ಥಿತರಿದ್ದರು .
Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

15 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

15 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

15 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

18 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

18 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago