Featured

ಕಾಪು ಪುರಸಭಾ ಚುನಾವಣೆ : ಜೆಡಿಎಸ್ ಪಕ್ಷದ ವತಿಯಿಂದ  ಸಮಾಲೋಚನ ಸಭೆ – Vishwanews24

ಕಾಪು ಪುರಸಭಾ ಚುನಾವಣೆ : ಜೆಡಿಎಸ್ ಪಕ್ಷದ ವತಿಯಿಂದ  ಸಮಾಲೋಚನ ಸಭೆ – Vishwanews24

ಕಾಪು ಪುರಸಭಾ ಚುನಾವಣೆಯ ತಯಾರಿ ಬಗ್ಗೆ ಜನತಾದಳ (ಜಾತ್ಯತೀತ)ಪಕ್ಷದ ವತಿಯಿಂದ  ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಕಾಪು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಶ್ರೀ ಇಕ್ಬಾಲ್ ಅತ್ರಾಡಿಯವರ ಅಧ್ಯಕ್ಷತೆಯಲ್ಲಿ  ಪುರಸಭಾ ವ್ಯಾಪ್ತಿಯ ಚುನಾವಣೆ ತಯಾರಿ ಬಗ್ಗೆ ಕಾಪು ಮಹಾಬಲಮಾಲ್ ನಲ್ಲಿರುವ ಪಕ್ಷ ಕಚೇರಿಯಲ್ಲಿ ದಿನಾಂಕ 03.12.2021ರಂದು ಸಭೆ ಜರಗಿತು.
ಶ್ರೀ ಎಚ್ ಡಿ ದೇವೇಗೌಡರು ಪ್ರಧಾನಮಂತ್ರಿಯಾಗಿ ಮತ್ತು ಶ್ರೀಎಚ್ ಡಿ ಕುಮಾರಸ್ವಾಮಿಯವರು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ  ಮಾಡಿದಂತಹ ಕೆಲಸಗಳನ್ನು ಜನರಿಗೆ ತಿಳಿಸುವುದು  ಹಾಗೂ ಕಾಪು ಪುರಸಭೆ ಮತ್ತು ಪ್ರಾಧಿಕಾರ ದಿಂದಾಗಿ ಆದ ತೊಂದರೆಗಳು, ಅದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಇನ್ನು ಮುಂದಿನ ದಿನಗಳಲ್ಲಿ  ನಮ್ಮ ಅಭ್ಯರ್ಥಿಗಳನ್ನು ಪುರಸಭೆಗೆ ಆಯ್ಕೆ ಮಾಡುವಲ್ಲಿ, ಜನರು ಸಹಕಾರ ಕೊಟ್ಟರೆ, ಪುರಸಭೆಯಲ್ಲಿ ಏನು ತೊಂದರೆ ಆಗುತ್ತಿತ್ತು ಅದನ್ನೆಲ್ಲ ನಿವಾರಿಸುವಲ್ಲಿ ಖಂಡಿತವಾಗಿ ಯಶಸ್ವಿಯಾಗುತ್ತೇವೆ. ನಮ್ಮನ್ನು ಬೆಂಬಲಿಸಿ ಎಂದು ಜನರಲ್ಲಿ ಸಹಕಾರವನ್ನು ಕೋರಬೇಕು,  ಎಲ್ಲಾ ಕಾರ್ಯಕರ್ತರು, ನಾಯಕರು ಒಗ್ಗಟ್ಟಿನಿಂದ ದುಡಿದು ಹೆಚ್ಚಿನ ಸಂಖ್ಯೆಯಲ್ಲಿ ಪುರಸಭಾ ಸದಸ್ಯರು ಆಯ್ಕೆಯಾಗುವಲ್ಲಿ ಪ್ರಯತ್ನಿಸಬೇಕು ಹಾಗೂ ಪುರಸಭಾ ಚುನಾವಣೆ ತಂತ್ರಗಾರಿಕೆ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಸಭೆಗೆ ನೀಡಿದರು.
ಕಾರ್ಯಾಧ್ಯಕ್ಷರಾದ ಶ್ರೀ ವಾಸುದೇವ ರಾವ್ ರವರು  ಸಭೆಯನ್ನುದ್ದೇಶಿಸಿ ಮಾತನಾಡಿದರು.ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ವೀಕ್ಷಕರಾದ ಸುಧಾಕರ್ ಶೆಟ್ಟಿ, ಉದಯ ಹೆಗ್ಡೆ, ಎಂ ಟಿ ವೆಂಕಟೇಶ್, ರಾಜು ಆರ್ ಪುತ್ರನ್, ಅಬ್ದುಲ್ ಹಮೀದ್ ಯೂಸುಫ್,ತಬಸುಮ್, ಉದಯ ಆರ್ ಶೆಟ್ಟಿ,ಶ್ರೀನಾಥ,ಅರವಿಂದ ಶೆಟ್ಟಿ,ರಶೀದ್,ಅಲ್ತಾಫ್,ಶಂಸುದ್ದೀನ್, ಸನವರ್, ಪಕ್ಷ ಕಾರ್ಯಕರ್ತರು ಉಪಸ್ಥಿತರಿದ್ದರು .
Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

6 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

6 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

8 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

9 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

10 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

10 hours ago