Featured

ಕಾಪು ಪುರಸಭಾ ಚುನಾವಣೆ : ಪಕ್ಷದ ವಿಪ್ ಉಲ್ಲಂಘಿಸಿದ ಸದಸ್ಯೆಯನ್ನು ಉಚ್ಚಾಟಿಸಿ ಕಾನೂನು ಕ್ರಮಕ್ಕೆ ಮುಂದಾದ SDPI – vishwanews24

ಕಾಪು ಪುರಸಭಾ ಚುನಾವಣೆ : ಪಕ್ಷದ ವಿಪ್ ಉಲ್ಲಂಘಿಸಿದ ಸದಸ್ಯೆಯನ್ನು ಉಚ್ಚಾಟಿಸಿ ಕಾನೂನು ಕ್ರಮಕ್ಕೆ ಮುಂದಾದ SDPI

ಕಾಪು :  ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಕಾಪು ಪುರಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಎಸ್ಸಿ ಮೀಸಲಾತಿ ಘೋಷಣೆಯಾಗಿತ್ತು.

ಆದರೆ ಇಲ್ಲಿ SDPI ಮತ್ತುಕಾಂಗ್ರೆಸ್ ಪಕ್ಷಗಳಲ್ಲಿ ಎಸ್ಸಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿದ್ದರೆ, ಬಿಜೆಪಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಎಸ್ಸಿ ಅಭ್ಯರ್ಥಿಯೇ ಇರಲಿಲ್ಲ. ಆದರಿಂದ ಆರಂಭದಲ್ಲೇ ಕಾಂಗ್ರೆಸ್ ಮತ್ತು SDPI ನಾವು ಒಟ್ಟಾಗಿ ಒಂದು ಅಭ್ಯರ್ಥಿಯನ್ನು ಹಾಕಿ ಅರ್ಧ ಅರ್ಧ ಅವಧಿಯಾಗಿ ಅಧಿಕಾರ ಹಂಚಿಕೊಳ್ಳುವ ಎಂಬ ಉದ್ದೇಶದಿಂದ ಕಾಂಗ್ರೆಸ್ ಜೊತೆಗೆ ಹಲವು ದಿನಗಳಿಂದ ಮಾತುಕತೆಗೆ ಪ್ರಯತ್ನ ನಡೆಸುತ್ತಿದ್ದರೂ, ಯಾವುದೇ ನಾಯಕರು ಮಾತುಕತೆಗೆ ಸಿಗಲಿಲ್ಲ.

ಕಾಂಗ್ರೆಸ್ ನಾಯಕ ಸೊರಕೆ ಅವರು ನಮ್ಮೊಂದಿಗೆ ಯಾವುದೇ ಮಾತುಕತೆಗೆ ಮುಂದಾಗದಂತೆ ಇತರ ನಾಯಕರಿಗೆ ನಿರ್ದೇಶನ ನೀಡಿದ್ದರು. ಚುನಾವಣೆಯ ಕೊನೆ ಗಳಿಗೆಯಲ್ಲಿ ಬಿಜೆಪಿಯು 20 ನೇ ಗುಜ್ಜಿ ವಾರ್ಡಿನಿಂದ SDPI ಪಕ್ಷದಿಂದ ಪುರಸಭೆ ಸದಸ್ಯೆಯಾಗಿ ಆಯ್ಕೆಯಾಗಿದ್ದ ಸರಿತಾ ಶಿವಾನಂದ್ ಅವರನ್ನು ಅವರ ಸಹೋದರರನ್ನು ಬಳಸಿಕೊಂಡು (ಚುನಾವಣೆ ಸಂದರ್ಭದಲ್ಲಿ ಈ ಸಹೋದರನ್ನು ಎದುರಿಸಿ ಸರಿತಾ ಅವರು ಸ್ಪರ್ಧೆ ನಡೆಸಿದ್ದರು) ತನ್ನತ್ತ ಸೆಳೆದುಕೊಂಡು ಆಪರೇಷನ್ ಕಮಲ ಮಾಡಿ, ಅನೈತಿಕವಾಗಿ ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ. ಒಂದು ವೇಳೆ ಮಾತುಕತೆಗೆ ಕಾಂಗ್ರೆಸ್ ಹಠಮಾರಿತನ ಬಿಟ್ಟು ಬಿಜೆಪಿಯನ್ನು ಸೋಲಿಸಲು ಮುಂದಾಗಿದ್ದರೆ ಸರಿತಾ ಅವರು ಬಿಜೆಪಿ ಜೊತೆ ಸೇರುತ್ತಿರಲಿಲ್ಲ.

ಚುನಾವಣೆ ಸಂದರ್ಭದಲ್ಲಿ SDPI ಪಕ್ಷ ಬಿಜೆಪಿಯನ್ನು ಸೋಲಿಸುವ ಭಾಗವಾಗಿ ಕಾಂಗ್ರೆಸ್ ಗೆ ಬೆಂಬಲ ನೀಡಿ, ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಆದೇಶಿಸಿ ತನ್ನ ಪಕ್ಷದ ಪುರಸಭಾ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು. ಆದರೆ ಸರಿತಾ ಶಿವಾನಂದ್ ಅವರು ಬಿಜೆಪಿಯ ಬೆಂಬಲ ಪಡೆದು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಪಕ್ಷದ ವಿಪ್ ಆದೇಶವನ್ನು ಉಲ್ಲಂಘನೆ ಮಾಡಿ ಪಕ್ಷ ವಿರೋಧಿಯಾಗಿ ನಡೆದುಕೊಂಡಿರುವುದು ಪಕ್ಷ ವಿರೋಧಿ ಚಟುವಟಿಕೆ ಮತ್ತು ವಿಶ್ವಾಸ ದ್ರೋಹ ದ ಪರಮಾವಧಿಯಾಗಿದೆ.

ಸರಿತಾ ಶಿವಾನಂದ್ ಅವರು ಪಕ್ಷ ವಿರೋಧಿಯಾಗಿ ಉಮೇದುದಾರಿಕೆ ಸಲ್ಲಿಸಿದ ಕೂಡಲೇ SDPI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವ ಅವರು ಪಕ್ಷದ ವಿಪ್ ವಿರುದ್ಧವಾಗಿ ಉಮೇದುದಾರಿಕೆ ಸಲ್ಲಿಸಿದ್ದರಿಂದ ಉಮೇದುದಾರಿಕೆಯನ್ನು ತಿರಸ್ಕರಿಸಬೇಕೆಂದು ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ್ದರು. ನಂತರ ಪಕ್ಷದ ವಿಪ್ ವಿರುದ್ಧ ನಡೆದ ಪುರಸಭಾ ಸದಸ್ಯೆ ಸರಿತಾ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಪಕ್ಷದ ಜಿಲ್ಲಾ ಸಮಿತಿಯು ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಿದೆ. ಕೂಡಲೇ ವಿಪ್ ವಿರುದ್ಧ ಪಕ್ಷಕ್ಕೆ ದ್ರೋಹ ಬಗೆದ ವಿಚಾರದಲ್ಲಿ ಕಾನೂನು ಕ್ರಮ ನಡೆಸುವುದಾಗಿ ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago