ಕಾಪು: ಇಲ್ಲಿನ ಪುರಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಪಾರ್ಟಿಯ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ, ರಾಜ್ಯ, ಜಿಲ್ಲಾ, ಕ್ಷೇತ್ರ ಮಟ್ಟದ ಬಿಜೆಪಿ ಧುರಿಣರು ಫೀಲ್ಡ್ಗೆ ಇಳಿದು ಅಭ್ಯರ್ಥಿ ಪರ ಮತಯಾಚನೆ ನಡೆಸುತ್ತಿದ್ದಾರೆ.
ಆದಿತ್ಯವಾರ ಬಿಜೆಪಿಯ ಮಹಾ ಅಭಿಯಾನ ಪ್ಲಾಪ್ ಶೋ ಕಂಡರು ಕೂಡ ಗುರ್ಮೆ ಸುರೇಶ್ ಶೆಟ್ಟಿ ಹೋದ ವಾರ್ಡಿನಲ್ಲಿ ಹಿರಿಯರೆಲ್ಲರೂ ಮುಂದೆ ಬಂದು ಸ್ವಾಗತಿಸಿದ ಘಟನೆ ನಡೆದಿದೆ.
ಯುವಕರ ಪಡೆಯಂತು ಗುರ್ಮೆ ಸುರೇಶ್ ಶೆಟ್ಟಿಯ ಜತೆಗೆನೆ ನಿಂತು ಮತಯಾಚನೆ ನಡೆಸಿದ್ದು ವಿಶೇಷವಾಗಿತ್ತು, ಮನೆಯಲ್ಲಿದ್ದ ಹಿರಿಯರು ಗುರ್ಮೆ ಸುರೇಶ್ ಶೆಟ್ಟಿಯನ್ನು ಕಂಡು ಕೋವಿಡ್ ಸಮಯಲ್ಲಿ ಮಾಡಿದ ಉಪಕಾರವನ್ನು ಸ್ಮರಣೆ ಮಾಡಿಕೊಂಡು ಬಾಯ್ತುಂಬ ಹಾರೈಸಿ ಹರಸಿದರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಆನಂದಭಾಷ್ಪ ಹರಿಸಿದ ಹಿರಿಯರು
ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿದ ಸಂಧರ್ಭದಲ್ಲಿ ಮತದಾರ ಗುರ್ಮೆ ಸುರೇಶ್ ಶೆಟ್ಟಿಯನ್ನು ಕಂಡು ಆನಂದಭಾಷ್ಪ ಹರಿಸಿದ ಘಟನೆಯೂ ನಡೆದಿದೆ, ಕಾರಲ್ಲಿ ಇಳಿಯುತ್ತಿರುವ ಸಮಯದಲ್ಲಿ ಹಿರಿಯ ಜೀವಗಳು ಹತ್ತಿರ ಬಂದು ಬಿಗಿದಪ್ಪಿ ಅತ್ಯಂತ ಪ್ರೀತಿಯಿಂದ ಮಾತಾಡಿಸಿ ಶುಭ ಹಾರೈಸಿದರು ಎಂದು ತಿಳಿದು ಬಂದಿದೆ.
ಗುರ್ಮೆ ಸುರೇಶ್ ಶೆಟ್ಟಿ ಕಾಪು ಭಾಗದಲ್ಲಿ ಅತ್ಯಂತ ಚಿರಪರಿಚಿತರು ಮತ್ತು ಎಲ್ಲಾ ವರ್ಗದ ಜನರನ್ನು ಕೂಡ ಅತ್ಯಂತ ಪ್ರೀತಿಯಿಂದ ಗೌರವಿಸಿ ಮಾತಾಡಿಸುವುದು ಮಾತ್ರವಲ್ಲದೆ ಸಾವಿರಾರು ಕುಟುಂಬಗಳ ಕಷ್ಟಗಳಿಗೆ ಸ್ಪಂದಿಸಿ ನೆರವಾದ ಕೀರ್ತಿ ಶೆಟ್ಟಿಯವರಿಗೆ ಇದೆ. ಕೋವಿಡ್ ಸಮಯದಲ್ಲಿ ಎರೆಡೆರಡು ಬಾರಿ ಬಡ ಕುಟುಂಬಗಳಿಗೆ ಪಡಿತರ ಕಿಟ್ ಮುಟ್ಟಿಸಿದ್ದು ಮತ್ತು ಅಂಬ್ಯುಲೆನ್ಸ್ ನೀಡಿಯೂ ಸಹಕರಿಸಿದ್ದನ್ನು ಜನ ಇಂದಿಗೂ ಮರೆತಿಲ್ಲ .
ಪೊಲಿಟಿಕಲ್ ಬ್ಯುರೋ ವಿಶ್ವನ್ಯೂಸ್24
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…