ಕಾಪು: ಕಾಪು ವಿಧಾನಸಭೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರಿಂದು ಕಾಪು ಪುರಸಭೆ ವ್ಯಾಪ್ತಿಯಲ್ಲಿ ಮತ ಯಾಚಿಸಿದರು.
ದೇಶವಿಂದು ಸ್ವಾತಂತ್ರ್ಯದ ಅಮೃತಕಾಲದಲ್ಲಿದೆ. ಪ್ರಧಾನ ಮಂತ್ರಿ ಅವರು ದೇಶವನ್ನು ಮುಂಚೂಣಿಗೆ ಕೊಂಡೊಯ್ಯಲು ಅನೇಕ ಸಂಕಲ್ಪ, ದೃಢ ನಿರ್ಧಾರಗಳನ್ನು ಮಾಡಿದ್ದಾರೆ. ಇವೆಲ್ಲವನ್ನು ಈಡೇರಿಸಲು ಅವರ ಕೈ ಬಲಪಡಿಸುವುದು ಅಗತ್ಯ. ಆದುದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳುವಂತೆ ಮಾಡಲು ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕಾಗಿದೆ ಎಂದರು.ತಮಗೆ ಮತ ನೀಡಿ ಗೆಲ್ಲಿಸಿದಲ್ಲಿ ಮುಂದಿನ ಐದು ವರ್ಷ ಜನತೆಯ ಸೇವೆಗೆ ತಮ್ಮ ಬದುಕು ಪಣವಾಗಿರುತ್ತದೆ ಎಂದೂ ಅವರು ಹೇಳಿದರು.
ಈ ಸಂದರ್ಭದಲ್ಲಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಸಂದೀಪ್ ಶೆಟ್ಟಿ, ಸುರೇಶ್ ದೇವಾಡಿಗ, ಲತಾ ದೇವಾಡಿಗ, ಅನಿಲ್ ಕುಮಾರ್, ಮೋಹನ್ ಕಾಪು, ಗಾಂಧಾರ ಸುವರ್ಣ, ರಂಜಿತ್ ಸುವರ್ಣ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…