ಕಾಪು: ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಎಸ್.ಡಿ.ಪಿ.ಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕೋಶಾಧಿಕಾರಿಗಳಾದ ಮನೋಹರ್ ಕಲ್ಮಾಡಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಜಿಲ್ಲಾ ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಪುರಸಭೆಯ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…