ಕಾಪು, ಜೂ. 11 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಘೋಷಣೆಯಂತೆ ಸೇವಾ ಹೀ ಸಂಘಟನ್ ಧ್ಯೇಯ ವಾಕ್ಯದಡಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ ಅವರು ಕೊರೊನಾ ವಾರಿಯರ್ಗಳಾಗಿ ದುಡಿಯುತ್ತಿರುವ ಕಾಪು ಪುರಸಭೆ 4೦ ಮಂದಿ ಪೌರ ಕಾರ್ಮಿಕರಿಗೆ ಸುಮಾರು 60 ಸಾವಿರ ರೂಪಾಯಿ ವೆಚ್ಚದಲ್ಲಿ ಪಡಿತರ ಕಿಟ್ಗಳನ್ನು ವಿತರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ನಡುವೆಯೂ ಪೌರ ಕಾರ್ಮಿಕರ ಸೇವೆ ಅನನ್ಯವಾಗಿದೆ. ಕಾಪು ಪಟ್ಟಣವು ಸ್ವಚ್ಛವಾಗಿ, ಪುರಸಭೆ ವ್ಯಾಪ್ತಿಯ ನಾಗರಿಕರು ಸ್ವಚ್ಛ ಗಾಳಿಯನ್ನು ಸೇವಿಸುವಲ್ಲಿ ಪೌರ ಕಾರ್ಮಿಕರ ಶ್ರಮ ಶ್ಲಾಘನೀಯವಾಗಿದೆ. ಅವರ ಸೇವೆಯನ್ನು ಗುರುತಿಸಿ, ಕುಟುಂಬವು ಲಾಕ್ಡೌನ್ ಸಂದರ್ಭದಲ್ಲಿ ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಪೂರಕವಾಗಿ ಪಡಿತರ ಕಿಟ್ಗಳನ್ನು ಒದಗಿಸಲಾಗುತ್ತಿದೆ ಎಂದರು.
ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಽಕಾರಿ ಡಾ| ಸುಬ್ರಾಯ ಕಾಮತ್, ಕಾಪು ಪುರಸಭೆಯ ಅಽಕಾರಿ ಬಾಲೇಶ್, ಕಾಪು ನಗರ ಯೋಜನಾ ಪ್ರಾಽಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಪುರಸಭೆಯ ನಿಕಟಪೂರ್ವ ಅಧ್ಯಕ್ಷ ಅನಿಲ್ ಕುಮಾರ್, ಸದಸ್ಯರಾದ ವಿಜಯ ಕರ್ಕೇರ, ಸುರೇಶ್ ದೇವಾಡಿಗ, ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುರ್ಣ, ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ, ಬಿಜೆಪಿ ಮುಖಂಡರಾದ ಸುಮಾ ಯು. ಶೆಟ್ಟಿ,. ಮಾಲಿನಿ ಶೆಟ್ಟಿ, ಗಣೇಶ್ ಕುಮಾರ್ ಮಟ್ಟು, ರತ್ನಾಕರ ಶೆಟ್ಟಿ, ಪ್ರವೀಣ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…