Featured

ಕಾಪು ಪುರಸಭೆ ಆಡಳಿತ ಪಕ್ಷದ ವಿರುದ್ಧ ಜಿಲ್ಲಾದಿಕಾರಿ ಮತ್ತು ಯೋಜನಾ ನಿರ್ದೇಶಕರಿಗೆ ಮನವಿ ಸಹಿತ ದೂರು ಸಲ್ಲಿಸಿದ ಬಿಜೆಪಿ:ಶಾಸಕ ಲಾಲಾಜಿ ಆರ್. ಮೆಂಡನ್

ಕಾಪು ಪುರಸಭೆ ಆಡಳಿತ ಪಕ್ಷದ ವಿರುದ್ಧ ದೂರು ಸಲ್ಲಿಸಿದ ಬಿಜೆಪಿ.

ಕಾಪು ಪುರಸಭೆಯ ಪ್ರಸ್ತುತ ಅದಿಕಾರದಲ್ಲಿರುವ ಆಡಳಿತ ಪಕ್ಷದ ಅದಿಕಾರಾªದಿ ಡಿ. 4ಕ್ಕೆ ಕೊನೆಗೊಳ್ಳುತ್ತಿದೆ. ಆಡಳಿತದ ಅವದಿ ಮುಕ್ತಾಯಗೊಂಡರೂ ಅಧ್ಯಕ್ಷ – ಉಪಾಧ್ಯಕ್ಷರು ಇನ್ನೂ ಕೂಡಾ ಆಡಳಿತದ ಗದ್ದುಗೆಯಲ್ಲಿದ್ದು ಇದು ನಿಯಮಬಾಹಿರವಾಗಿದೆ. ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕಿರುವ ಪುರಸಭೆಯ ಮುಖ್ಯಾದಿಕಾರಿಗಳೂ ಕೂಡಾ ಆಡಳಿತ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಪುರಸಭೆ ವಿಪಕ್ಷ ಸದಸ್ಯರ ನೇತೃತ್ವದಲ್ಲಿ ಪುರಸಭೆ ಆಡಳಿತ ಮತ್ತು ಮುಖ್ಯಾದಿಕಾರಿಗಳ ವಿರುದ್ಧ ಜಿಲ್ಲಾದಿಕಾರಿ ಮತ್ತು ಯೋಜನಾ ನಿರ್ದೇಶಕರಿಗೆ ಮನವಿ ಸಹಿತ ದೂರು ನೀಡಲಾಗಿದೆ ಎಂದು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಕಾಪು ಕ್ಷೇತ್ರ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಸ್ತುತ ಆಡಳಿತ ಪಕ್ಷದ ಅದಿಕಾರದ ಅವದಿ ಮುಕ್ತಾಯಗೊಂಡರೂ ಚುನಾವಣಾ ಪ್ರಕಿಯೆಗಳು ನಡೆಯುತ್ತಿಲ್ಲ. ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಮುಖ್ಯಾದಿಕಾರಿಗಳು ವಾರದ ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತು. ಹಾಗಿದ್ದರೂ ಇನ್ನೂ ಕೂಡಾ ಆ ಬಗ್ಗೆ ಯೋಚನೆ ಮಾಡದೇ ಇರುವುದು ಖಂಡನೀಯವಾಗಿದೆ ಎಂದು ಅವರು ಹೇಳಿದರು.
ಪುರಸಭೆ ವಿಪಕ್ಷ ನಾಯಕ ಅರುಣ್ ಶೆಟ್ಟಿ ಪಾದೂರು ಮಾತನಾಡಿ, ಶಾಸಕರು ಮತ್ತು ಸಂಸದರಿಗೆ ಸ್ಥಾಯೀ ಸಮಿತಿ ರಚನೆ ಸಂದರ್ಭದ ಮತ ಚಲಾಯಿಸುವ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಮೂರನೇ ಒಂದಂಶದ ಕೋರಂ ತೋರಿಸಿದ್ದರೂ ಅದನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಕಾಪು ಕ್ಷೇತ್ರ ಪ್ರಭಾರಿ ಗುರ್ಮೆ ಸುರೇಶ್ ಶೆಟ್ಟಿ ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ನಗರ ಬಿಜೆಪಿ ಅಧ್ಯಕ್ಷ ಸಂದೀಪ್‍ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago