Featured

ಕಾಪು ಪುರಸಭೆ ಚುನಾವಣೆ ಫಲಿತಾಂಶ – ನವ ಕಾಪು ನಿರ್ಮಾಣದ ಬಿಜೆಪಿ ಸಂಕಲ್ಪಕ್ಕೆ ಗೆಲುವು : ಯಶ್ ಪಾಲ್ ಸುವರ್ಣ – Vishwanews24

ಕಾಪು ಪುರಸಭೆ ಚುನಾವಣೆ ಫಲಿತಾಂಶ – ನವ ಕಾಪು ನಿರ್ಮಾಣದ ಬಿಜೆಪಿ ಸಂಕಲ್ಪಕ್ಕೆ ಗೆಲುವು

ಎಸ್ ಡಿ ಪಿ ಐ ಗೆಲುವು ಅಡಳಿತ ವ್ಯವಸ್ಥೆಗೆ ಮಾರಕ..

ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಓಲೈಕೆಯ ನೀತಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣ..

ಯಶ್ ಪಾಲ್ ಸುವರ್ಣ – Vishwanews24

ಕಾಪು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು12 ವಾರ್ಡುಗಳಲ್ಲಿ ಗೆಲ್ಲಿಸಿ ಪೂರ್ಣ ಬಹುಮತ ನೀಡುವ ಮೂಲಕ ಮತದಾರರು ಬಿಜೆಪಿಯ ನವ ಕಾಪು ನಿರ್ಮಾಣದ ಸಂಕಲ್ಪಕ್ಕೆ ಶಕ್ತಿ ತುಂಬಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ  ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರಕಾರದ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿರುವ ಯೋಜನೆಗಳು ಹಾಗೂ ಪುರಸಭೆಯಲ್ಲಿ ಸ್ವಚ್ಛ, ದಕ್ಷ  ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಜನತೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ.
ರಾಷ್ಟ್ರೀಯವಾದಿ ಚಿಂತನೆಯ ನಿಷ್ಠಾವಂತ  ಬಿಜೆಪಿ ಕಾರ್ಯಕರ್ತರ ಪರಿಶ್ರಮ ಹಾಗೂ ಪಕ್ಷದ ನಾಯಕರ ಸಾಮೂಹಿಕ ನೇತೃತ್ವದಲ್ಲಿ ಬಿಜೆಪಿಯ ಪ್ರಚಂಡ ಗೆಲುವಿನ ಮೂಲಕ  ಕಾಂಗ್ರೆಸ್ ಪಕ್ಷದ ವೈಫಲ್ಯ ಹಾಗೂ ಅಪಪ್ರಚಾರದ ಮೂಲಕ ಮಾಜಿ ಸಚಿವರ ಗೆಲುವಿನ ವ್ಯರ್ಥಪ್ರಯತ್ನಕ್ಕೆ ಮತದಾರರು ಸೂಕ್ತ ಉತ್ತರ ನೀಡಿದ್ದಾರೆ.
ಮುಂಬರುವ ದಿನಗಳಲ್ಲಿ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಪಕ್ಷ ಕಾರ್ಯಪ್ರವೃತ್ತರಾಗಲಿದ್ದು ಕಾಪುವಿನ ಸಮಗ್ರ ಅಭಿವೃದ್ಧಿಗೆ ಪೂರಕವಾದ ಅಡಳಿತ ನೀಡುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ ಡಿ ಪಿ ಐ ಗೆಲುವು ಅಡಳಿತ ವ್ಯವಸ್ಥೆಗೆ ಮಾರಕ
ರಾಷ್ಟ್ರವಿರೋಧಿ ಕೋಮುವಾದಿ ಚಿಂತನೆಯ ಎಸ್ ಡಿ ಪಿ ಐ  ಪಕ್ಷದ ಅಭ್ಯರ್ಥಿಗಳ ಗೆಲುವು ಆಡಳಿತ ವ್ಯವಸ್ಥೆಗೆ ಮಾರಕಗಿದ್ದು, ಹಲವಾರು ದೇಶ ವಿರೋಧಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿರುವ ಎಸ್ ಡಿ ಪಿ ಐ ಪಕ್ಷ   ರಾಜಕೀಯವಾಗಿ ಕರಾವಳಿ ಭಾಗದಲ್ಲಿ ನೆಲೆಕಂಡು ಕೊಳ್ಳುತ್ತಿರುವುದು ದುರದೃಷ್ಟಕರ.
ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಓಲೈಕೆಯ ನೀತಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣವಾಗಿದೆ.
Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

17 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

17 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago