Featured

ಕಾಪು ಪುರಸಭೆ ಚುನಾವಣೆ ಫಲಿತಾಂಶ – ನವ ಕಾಪು ನಿರ್ಮಾಣದ ಬಿಜೆಪಿ ಸಂಕಲ್ಪಕ್ಕೆ ಗೆಲುವು : ಯಶ್ ಪಾಲ್ ಸುವರ್ಣ – Vishwanews24

ಕಾಪು ಪುರಸಭೆ ಚುನಾವಣೆ ಫಲಿತಾಂಶ – ನವ ಕಾಪು ನಿರ್ಮಾಣದ ಬಿಜೆಪಿ ಸಂಕಲ್ಪಕ್ಕೆ ಗೆಲುವು

ಎಸ್ ಡಿ ಪಿ ಐ ಗೆಲುವು ಅಡಳಿತ ವ್ಯವಸ್ಥೆಗೆ ಮಾರಕ..

ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಓಲೈಕೆಯ ನೀತಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣ..

ಯಶ್ ಪಾಲ್ ಸುವರ್ಣ – Vishwanews24

ಕಾಪು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು12 ವಾರ್ಡುಗಳಲ್ಲಿ ಗೆಲ್ಲಿಸಿ ಪೂರ್ಣ ಬಹುಮತ ನೀಡುವ ಮೂಲಕ ಮತದಾರರು ಬಿಜೆಪಿಯ ನವ ಕಾಪು ನಿರ್ಮಾಣದ ಸಂಕಲ್ಪಕ್ಕೆ ಶಕ್ತಿ ತುಂಬಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ  ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರಕಾರದ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿರುವ ಯೋಜನೆಗಳು ಹಾಗೂ ಪುರಸಭೆಯಲ್ಲಿ ಸ್ವಚ್ಛ, ದಕ್ಷ  ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಜನತೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ.
ರಾಷ್ಟ್ರೀಯವಾದಿ ಚಿಂತನೆಯ ನಿಷ್ಠಾವಂತ  ಬಿಜೆಪಿ ಕಾರ್ಯಕರ್ತರ ಪರಿಶ್ರಮ ಹಾಗೂ ಪಕ್ಷದ ನಾಯಕರ ಸಾಮೂಹಿಕ ನೇತೃತ್ವದಲ್ಲಿ ಬಿಜೆಪಿಯ ಪ್ರಚಂಡ ಗೆಲುವಿನ ಮೂಲಕ  ಕಾಂಗ್ರೆಸ್ ಪಕ್ಷದ ವೈಫಲ್ಯ ಹಾಗೂ ಅಪಪ್ರಚಾರದ ಮೂಲಕ ಮಾಜಿ ಸಚಿವರ ಗೆಲುವಿನ ವ್ಯರ್ಥಪ್ರಯತ್ನಕ್ಕೆ ಮತದಾರರು ಸೂಕ್ತ ಉತ್ತರ ನೀಡಿದ್ದಾರೆ.
ಮುಂಬರುವ ದಿನಗಳಲ್ಲಿ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಪಕ್ಷ ಕಾರ್ಯಪ್ರವೃತ್ತರಾಗಲಿದ್ದು ಕಾಪುವಿನ ಸಮಗ್ರ ಅಭಿವೃದ್ಧಿಗೆ ಪೂರಕವಾದ ಅಡಳಿತ ನೀಡುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ ಡಿ ಪಿ ಐ ಗೆಲುವು ಅಡಳಿತ ವ್ಯವಸ್ಥೆಗೆ ಮಾರಕ
ರಾಷ್ಟ್ರವಿರೋಧಿ ಕೋಮುವಾದಿ ಚಿಂತನೆಯ ಎಸ್ ಡಿ ಪಿ ಐ  ಪಕ್ಷದ ಅಭ್ಯರ್ಥಿಗಳ ಗೆಲುವು ಆಡಳಿತ ವ್ಯವಸ್ಥೆಗೆ ಮಾರಕಗಿದ್ದು, ಹಲವಾರು ದೇಶ ವಿರೋಧಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿರುವ ಎಸ್ ಡಿ ಪಿ ಐ ಪಕ್ಷ   ರಾಜಕೀಯವಾಗಿ ಕರಾವಳಿ ಭಾಗದಲ್ಲಿ ನೆಲೆಕಂಡು ಕೊಳ್ಳುತ್ತಿರುವುದು ದುರದೃಷ್ಟಕರ.
ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಓಲೈಕೆಯ ನೀತಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣವಾಗಿದೆ.
Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

8 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

9 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

9 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

9 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

9 hours ago