ಕಾಪು ಪುರಸಭೆ ಚುನಾವಣೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಸಂಘಟನಾ ಸಭೆ-ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಕರೆ
ಕಾಪು, ಜು. 6: ಸ್ಥಳೀಯ ಪುರಸಭೆ ಚುನಾವಣೆ ಹಾಗೂ ಪಕ್ಷದ ಸಂಘಟನಾತ್ಮಕ ಚಟುವಟಿಕೆ ಬಗ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಅಲೆವೂರು ಅಧ್ಯಕ್ಷತೆಯಲ್ಲಿ ಕಾಪು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಭೆಯಲ್ಲಿ ಭಾಗವಹಿಸಿ, ಪುರಸಭೆ ಚುನಾವಣಾ ಪೂರ್ವತಯಾರಿ ಬಗ್ಗೆ ಹಾಗೂ ಬೂತ್ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾಗಿರುವ ಅಗತ್ಯ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮುಂದಿನ ಚುನಾವಣೆ ಗೆಲ್ಲುವ ಕುರಿತ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು.
ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಮಹಾ ಶಕ್ತಿಕೇಂದ್ರ ಅಧ್ಯಕ್ಷ ಸಂದೀಪ್ ಶೆಟ್ಟಿ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು ಪುರಸಭೆ ಉಸ್ತುವಾರಿ ಮಾಲಿನಿ ಶೆಟ್ಟಿ, ಬೂತ್ ಅಧ್ಯಕ್ಷರು, ಪುರಸಭಾ ಮಾಜಿ ಸದಸ್ಯರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಇದ್ದರು.
