Featured

ಕಾಪು ಪುರಸಭೆ-ಪ್ರಾಧಿಕಾರದಲ್ಲಿ ಬ್ರೋಕರ್ ಹಾವಳಿ- ವಯಾ ಇಲ್ಲಾಂದ್ರೆ ನಿಮ್ಮ ಕೆಲಸ ಆಗಲ್ಲ : vishwanews24

ಕಾಪು ಪುರಸಭೆ-ಪ್ರಾಧಿಕಾರದಲ್ಲಿ ಬ್ರೋಕರ್ ಹಾವಳಿ- ವಯಾ ಇಲ್ಲಾಂದ್ರೆ ನಿಮ್ಮ ಕೆಲಸ ಆಗಲ್ಲ : vishwanews24

ಅವಳಿ-ಜವಳಿ ಇಲಾಖೆಯ ಕಾಟಕ್ಕೆ ಕಂಗೆಟ್ಟ ಸಾರ್ವಜನಿಕರು

ಕಾಪು : ಇಲ್ಲಿನ ಪುರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಸದ್ಯ ಅವಳಿ-ಜವಳಿ ಮಕ್ಕಳಂತೆ ಕಾರ್ಯನಿರ್ವಹಿಸುತ್ತಿದೇಯೆ ಎಂಬ ಅನುಮಾನ ಮತ್ತಷ್ಟು ಬಿಗುವಾಗಿದೆ.

ಈ ಎರಡೂ ಕಚೇರಿಯಲ್ಲಿ ಕೂಡ ದಾಖಲೆ-ಲೈಸನ್ಸ್-ಸರ್ವೆ- ಸೇರಿದಂತೆ ಯಾವುದೇ ಕೆಲಸ ನಡೆಯಬೇಕಾದರೂ ಕೂಡ ನೇರವಾಗಿ ಸಾರ್ವಜನಿಕ ಹೋದರೆ ಕೆಲಸಗಳು ಆಗುತ್ತಿಲ್ಲ ಬದಲಾಗಿ ವಯಾ ಬ್ರೋಕರ್ ಸಮೇತ ದಾಖಲೆ ಸಲ್ಲಿಸಿದರೆ ಮಾತ್ರ ಕೆಲಸ ಕಾರ್ಯಗಳು ನಡೆಯುತ್ತಿದೆ ಎಂಬ ಆರೋಪ ಹಿಂದಿನಿಂದಲೂ ಕೇಳಿ ಬಂದಿತ್ತು ಅದಕ್ಕೆ ಪೂರಕವಾಗಿ ಇತ್ತೀಚಿನ ಬೆಳವಣಿಗೆಗಳು ಅದಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

ಲಂಚದ ಕೋಡ್ ವರ್ಡ್ “ಪೆನ್ನ್”

ಅಸಲಿಗೆ ಕಾಪು ಪುರಸಭೆಗೆ ಆಯ್ಕೆಯಾದ ಸದಸ್ಯರು ಸಾಚರಾಗಿದ್ದರೂ ಕೂಡ ಅಧಿಕಾರ ವರ್ಗ ಮಾತ್ರ ಸಾರ್ವಜನಿಕರ ಕಿಸೆ ನೋಡಿಯೆ ಕೆಲಸ ಮಾಡುತ್ತಿದ್ದಾರೆಂಬ ಆರೋಪ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡುತ್ತಿದೆ.

ನೇರವಾಗಿ ಹಣ ಕೇಳದಿದ್ದರೂ ಬ್ರೋಕರ್ ಮುಖೇನ‌ ಫೈಲ್ ಸಲ್ಲಿಸುವಾಗ ಫೀಸ್ ಜತೆಗೆ ಲಂಚದ ಹಣವೂ ಕೂಡಿರುತ್ತದೆಂಬ ಮಾತು ಚಾಲ್ತಿಯಲ್ಲಿದೆ.

ಪರಿಶೀಲನೆ-ತಪಾಸಣೆ ಎರಡಕ್ಕೂ ಒಂದೇ ಅರ್ಥವಾದರೂ ಕೂಡ ಕಾಪು ಪುರಸಭೆಯಲ್ಲಿ ಇವೆರೆಡಕ್ಕೂ ಬೇರೆ ಬೇರೆ ಅರ್ಥವಿದೆ ಯಾವುದೇ ಕಟ್ಟಡ ಮನೆ ನಿರ್ಮಾಣ ಮಾಡಬೇಕಾದರೂ ಖಾಸಾಗಿ ಕಾರು ಇಲ್ಲದೆ ಅಧಿಕಾರಿ ವರ್ಗದ ಕಾಲು ಭೂಮಿಗೆ ಇಡಲು ಸಾಧ್ಯವೇ ಇಲ್ಲ ಎಂಬ ವರ್ತನೆ ಸಾಲ‌ಮಾಡಿ ಮನೆಕಟ್ಟಲು ಹೊರಟಿರುವ ಸಾರ್ವಜನಿಕರ ಪಾಲಿಗೆ ಇರುಸು-ಮುರುಸಾಗಿದೆ.

ಪೆನ್ ಅಂದರೆ ಒಂದು ಸಾವಿರ -ಹೀಗೆ ಪೆನ್ನ್ ಲೆಕ್ಕದಲ್ಲಿ ಲಂಚವತಾರ ಪುರಸಭೆಯ ಪರಿಸರದೆಲ್ಲೆಡೆ ಗಬ್ಬು ನಾರುತ್ತಿದೆ ಎಂಬ ಮಾತು ಜೋರಾಗಿಯೇ ಕೇಳಿ ಬರುತ್ತಿದೆ ಕಳೆದ ವಾರ ಯಾರೊಬ್ಬರೂ ಅಧಿಕಾರಿ ಪೆನ್ನ್ ಕೇಳಿದಕ್ಕೆ ” ಕೆಲಸ ಆಗುವುದಾದರೆ ಐದರ ಬದಲಿಗೆ ಇಪ್ಪತೈದ್ ಪೆನ್ನ್ ನೀಡಿದರಂತೆ ಒಬ್ಬಾತ ಆ‌ ಸಂಧರ್ಭದಲ್ಲಿಯೇ ಪೆನ್ನಿನ‌ ಅಸಲಿ ವಿಚಾರ ಹೊರಗೆ ಬಂದಿರುವಂತದ್ದು ಎಂದು ಒಳಗಿನ ಸಿಬ್ಬಂದಿಗಳು ಗುಟ್ಟಾಗಿ ಗಟ್ಟಿಯಾಗಿ ಹಾಸ್ಯ ಮಾಡುತ್ತಿದ್ದರಂತೆ .
ಇದು ಕಾಪು ಪುರಸಭೆಯ ಹಣೆಬರಹವಾದರೇ ಪ್ರಾಧಿಕಾರ ಇದಕ್ಕಿಂತಲೂ ಒಂದು ಪಟ್ಟು ಮುಂದಕ್ಕೆ ಹೋಗಿ ನಗರಾಭಿವೃದ್ಧಿ ಪ್ರಾಧಿಕಾರ ಬದಲು “ಬ್ರೋಕರಾಬೀವೃದ್ದಿ ಪ್ರಾಧಿಕಾರ ” ವಾಗಿ ಬದಲಾಗಿದೆ.
ಯಾವುದೇ ಕೆಲಸವಾಗಬೇಕಾದರೂ ಕೂಡ ವಯಾ ಬ್ರೋಕರ್ ಜತೆಗೆನೆ ನಿಮ್ಮ ಫೈಲ್ ಹೋಗಬೇಕು ಇಲ್ಲವಾದಲ್ಲಿ ಒಂದೆರಡು ಬಾರಿಗೆ ಆಗುವ ಕೆಲಸ ಎರಡು ತಿಂಗಳಾದರೂ ಆಗುವುದಿಲ್ಲ ಎಂಬ ವಿಚಾರಕ್ಕೆ ಸಾರ್ವಜನಿಕರು ಬಹಿರಂಗವಾಗಿಯೇ ಕಾಪುವಿನ‌ ಅವಳಿ ಜವಳಿ ಮಕ್ಕಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಇನ್ನಾದರೂ ಈ ಬಗ್ಗೆ ಉನ್ನತ ಅಧಿಕಾರಿಗಳು-ಜನಪ್ರತಿನಿಧಿಗಳು ಹೆಚ್ಚಿನ ಕ್ರಮ ವಹಿಸಿ ಜನರ ಪಾಲಿಗೆ ನೆರವಾಗಬೇಕಿದೆ.

ಬ್ಯುರೋ ರಿಪೋರ್ಟ್:vishwanews24ಕಾಪು

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago