Featured

ಕಾಪು : ಪುರಸಭೆ ಮಾಜಿ ಉಪಾಧ್ಯಕ್ಷರ ಮನೆಯಲ್ಲಿ ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಸಹಿತ ಬೆಲೆಬಾಳುವ ಸೊತ್ತು ಕಳ್ಳತನ – vishwanews24

ಕಾಪು : ಪುರಸಭೆ ಮಾಜಿ ಉಪಾಧ್ಯಕ್ಷರ ಮನೆಯಲ್ಲಿ ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಸಹಿತ ಬೆಲೆಬಾಳುವ ಸೊತ್ತು ಕಳ್ಳತನ

ಕಾಪು: ವಿದೇಶ ಪ್ರವಾಸಕ್ಕೆ ತೆರಳಿರುವ ಕಾಪು ಪುರಸಭೆ ಮಾಜಿ ಉಪಾಧ್ಯಕ್ಷ ಕೆ.ಎಚ್‌. ಉಸ್ಮಾನ್‌ ಅವರ ಮನೆಯಿಂದ ಸಾವಿರಾರು ರೂಪಾಯಿ ಮೌಲ್ಯದ ಚಿನ್ನಾಭರಣ ಸಹಿತ ಬೆಲೆಬಾಳುವ ಸೊತ್ತುಗಳನ್ನು ಕದ್ದೊಯ್ದ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಕಾಪು ಪಡು ಗ್ರಾಮ ನಿವಾಸಿ ಕೆ.ಎಚ್‌. ಉಸ್ಮಾನ್‌ ಅವರು ಎರಡು ತಿಂಗಳ ಹಿಂದೆ ತನ್ನ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ದುಬಾೖಗೆ ತೆರಳಿದ್ದು, ಅವರ ಸಹೋದರ ಮನೆ ಬಳಿ ಹೋದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಜ. 22ರಿಂದ ಜ. 23ರ ನಡುವಿನ ಅಂತರದಲ್ಲಿ ಉಸ್ಮಾನ್‌ ಅವರ ಮನೆಯ ಮುಂದಿನ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 12 ಗ್ರಾಂ ತೂಕದ ಕಿವಿಯ ಚಿನ್ನದ ಬೆಂಡೋಲೆ – 2, ಚಿನ್ನದ ಪೆಂಡೆಂಟ್‌, ವಿದೇಶಿ ಕೈಗಡಿಯಾರ – 2, ವಿದೇಶಿ ಪರ್‌ಫ್ಯೂಮ್‌ – 4 ಸಹಿತ ಅಂದಾಜು 95 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕದ್ದೊಯ್ದಿದ್ದಾರೆ. ಸ್ಮಾನ್‌ ಸಹೋದರ ಕೆ.ಎಚ್‌. ಅಬೂಬೂಕ್ಕರ್‌ ನೀಡಿರುವ ದೂರಿನಂತೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಕ್ಕಪಕ್ಕದವರಿಗೂ ಗೊತ್ತಾಗಿಲ್ಲ
ರಾಷ್ಟ್ರೀಯ ಹೆದ್ದಾರಿ 66ರ ಸನಿಹದಲ್ಲೇ ಇರುವ ಉಸ್ಮಾನ್‌ ಅವರ ಮನೆಯ ಆವರಣದಲ್ಲೇ ಕೆಲಸದವರ ಮನೆಯಿದೆ. ಮನೆಯ ಪಕ್ಕದಲ್ಲೇ ಸಹೋದರನ ಮನೆಯೂ ಇದೆ. ಇಷ್ಟಾದರೂ ಅವರ ಮನೆಯಲ್ಲಿ ಕಳ್ಳತನ ನಡೆದಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಪೊಲೀಸರಿಂದ ಸೂಚನೆ
ತಿಂಗಳುಗಟ್ಟಲೆ ಮನೆಯಿಂದ ಹೊರಗೆ ಹೋಗುವಾಗ ಪೊಲೀಸ್‌ ಠಾಣೆ ಅಥವಾ ಬೀಟ್‌ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಆ ಮನೆಯ ಮೇಲೆ ವಿಶೇಷ ನಿಗಾ ಇರಿಸಲು ಸಾಧ್ಯವಾಗುತ್ತದೆ. ಅಂತಹ ಮನೆಗಳಿಗೆ ಮನೆಯವರು ಸಿಸಿ ಕೆಮರಾಗಳನ್ನು ಅಳವಡಿಸಿದರೆ ಕಳ್ಳತನ ಪ್ರಕರಣ ನಡೆಯದಂತೆ ತಡೆಯಲು ಮತ್ತು ಪ್ರಕರಣ ನಡೆದರೆ ಅದನ್ನು ಭೇದಿಸಲು ಸುಲಭವಾಗುತ್ತದೆ ಎಂದು ಕಾಪು ಎಸ್‌ಐ ತೇಜಸ್ವಿ ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

6 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

7 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

8 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

9 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

9 hours ago