Featured

ಕಾಪು : ಪುರಸಭೆ ಮಾಜಿ ಉಪಾಧ್ಯಕ್ಷರ ಮನೆಯಲ್ಲಿ ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಸಹಿತ ಬೆಲೆಬಾಳುವ ಸೊತ್ತು ಕಳ್ಳತನ – vishwanews24

ಕಾಪು : ಪುರಸಭೆ ಮಾಜಿ ಉಪಾಧ್ಯಕ್ಷರ ಮನೆಯಲ್ಲಿ ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಸಹಿತ ಬೆಲೆಬಾಳುವ ಸೊತ್ತು ಕಳ್ಳತನ

ಕಾಪು: ವಿದೇಶ ಪ್ರವಾಸಕ್ಕೆ ತೆರಳಿರುವ ಕಾಪು ಪುರಸಭೆ ಮಾಜಿ ಉಪಾಧ್ಯಕ್ಷ ಕೆ.ಎಚ್‌. ಉಸ್ಮಾನ್‌ ಅವರ ಮನೆಯಿಂದ ಸಾವಿರಾರು ರೂಪಾಯಿ ಮೌಲ್ಯದ ಚಿನ್ನಾಭರಣ ಸಹಿತ ಬೆಲೆಬಾಳುವ ಸೊತ್ತುಗಳನ್ನು ಕದ್ದೊಯ್ದ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಕಾಪು ಪಡು ಗ್ರಾಮ ನಿವಾಸಿ ಕೆ.ಎಚ್‌. ಉಸ್ಮಾನ್‌ ಅವರು ಎರಡು ತಿಂಗಳ ಹಿಂದೆ ತನ್ನ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ದುಬಾೖಗೆ ತೆರಳಿದ್ದು, ಅವರ ಸಹೋದರ ಮನೆ ಬಳಿ ಹೋದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಜ. 22ರಿಂದ ಜ. 23ರ ನಡುವಿನ ಅಂತರದಲ್ಲಿ ಉಸ್ಮಾನ್‌ ಅವರ ಮನೆಯ ಮುಂದಿನ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 12 ಗ್ರಾಂ ತೂಕದ ಕಿವಿಯ ಚಿನ್ನದ ಬೆಂಡೋಲೆ – 2, ಚಿನ್ನದ ಪೆಂಡೆಂಟ್‌, ವಿದೇಶಿ ಕೈಗಡಿಯಾರ – 2, ವಿದೇಶಿ ಪರ್‌ಫ್ಯೂಮ್‌ – 4 ಸಹಿತ ಅಂದಾಜು 95 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕದ್ದೊಯ್ದಿದ್ದಾರೆ. ಸ್ಮಾನ್‌ ಸಹೋದರ ಕೆ.ಎಚ್‌. ಅಬೂಬೂಕ್ಕರ್‌ ನೀಡಿರುವ ದೂರಿನಂತೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಕ್ಕಪಕ್ಕದವರಿಗೂ ಗೊತ್ತಾಗಿಲ್ಲ
ರಾಷ್ಟ್ರೀಯ ಹೆದ್ದಾರಿ 66ರ ಸನಿಹದಲ್ಲೇ ಇರುವ ಉಸ್ಮಾನ್‌ ಅವರ ಮನೆಯ ಆವರಣದಲ್ಲೇ ಕೆಲಸದವರ ಮನೆಯಿದೆ. ಮನೆಯ ಪಕ್ಕದಲ್ಲೇ ಸಹೋದರನ ಮನೆಯೂ ಇದೆ. ಇಷ್ಟಾದರೂ ಅವರ ಮನೆಯಲ್ಲಿ ಕಳ್ಳತನ ನಡೆದಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಪೊಲೀಸರಿಂದ ಸೂಚನೆ
ತಿಂಗಳುಗಟ್ಟಲೆ ಮನೆಯಿಂದ ಹೊರಗೆ ಹೋಗುವಾಗ ಪೊಲೀಸ್‌ ಠಾಣೆ ಅಥವಾ ಬೀಟ್‌ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಆ ಮನೆಯ ಮೇಲೆ ವಿಶೇಷ ನಿಗಾ ಇರಿಸಲು ಸಾಧ್ಯವಾಗುತ್ತದೆ. ಅಂತಹ ಮನೆಗಳಿಗೆ ಮನೆಯವರು ಸಿಸಿ ಕೆಮರಾಗಳನ್ನು ಅಳವಡಿಸಿದರೆ ಕಳ್ಳತನ ಪ್ರಕರಣ ನಡೆಯದಂತೆ ತಡೆಯಲು ಮತ್ತು ಪ್ರಕರಣ ನಡೆದರೆ ಅದನ್ನು ಭೇದಿಸಲು ಸುಲಭವಾಗುತ್ತದೆ ಎಂದು ಕಾಪು ಎಸ್‌ಐ ತೇಜಸ್ವಿ ತಿಳಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

1 hour ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

1 hour ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

1 hour ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

5 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

5 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

5 hours ago