Featured

ಕಾಪು : ಪುರಸಭೆ ಮಾಜಿ ಉಪಾಧ್ಯಕ್ಷರ ಮನೆಯಲ್ಲಿ ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಸಹಿತ ಬೆಲೆಬಾಳುವ ಸೊತ್ತು ಕಳ್ಳತನ – vishwanews24

ಕಾಪು : ಪುರಸಭೆ ಮಾಜಿ ಉಪಾಧ್ಯಕ್ಷರ ಮನೆಯಲ್ಲಿ ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಸಹಿತ ಬೆಲೆಬಾಳುವ ಸೊತ್ತು ಕಳ್ಳತನ

ಕಾಪು: ವಿದೇಶ ಪ್ರವಾಸಕ್ಕೆ ತೆರಳಿರುವ ಕಾಪು ಪುರಸಭೆ ಮಾಜಿ ಉಪಾಧ್ಯಕ್ಷ ಕೆ.ಎಚ್‌. ಉಸ್ಮಾನ್‌ ಅವರ ಮನೆಯಿಂದ ಸಾವಿರಾರು ರೂಪಾಯಿ ಮೌಲ್ಯದ ಚಿನ್ನಾಭರಣ ಸಹಿತ ಬೆಲೆಬಾಳುವ ಸೊತ್ತುಗಳನ್ನು ಕದ್ದೊಯ್ದ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಕಾಪು ಪಡು ಗ್ರಾಮ ನಿವಾಸಿ ಕೆ.ಎಚ್‌. ಉಸ್ಮಾನ್‌ ಅವರು ಎರಡು ತಿಂಗಳ ಹಿಂದೆ ತನ್ನ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ದುಬಾೖಗೆ ತೆರಳಿದ್ದು, ಅವರ ಸಹೋದರ ಮನೆ ಬಳಿ ಹೋದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಜ. 22ರಿಂದ ಜ. 23ರ ನಡುವಿನ ಅಂತರದಲ್ಲಿ ಉಸ್ಮಾನ್‌ ಅವರ ಮನೆಯ ಮುಂದಿನ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 12 ಗ್ರಾಂ ತೂಕದ ಕಿವಿಯ ಚಿನ್ನದ ಬೆಂಡೋಲೆ – 2, ಚಿನ್ನದ ಪೆಂಡೆಂಟ್‌, ವಿದೇಶಿ ಕೈಗಡಿಯಾರ – 2, ವಿದೇಶಿ ಪರ್‌ಫ್ಯೂಮ್‌ – 4 ಸಹಿತ ಅಂದಾಜು 95 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕದ್ದೊಯ್ದಿದ್ದಾರೆ. ಸ್ಮಾನ್‌ ಸಹೋದರ ಕೆ.ಎಚ್‌. ಅಬೂಬೂಕ್ಕರ್‌ ನೀಡಿರುವ ದೂರಿನಂತೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಕ್ಕಪಕ್ಕದವರಿಗೂ ಗೊತ್ತಾಗಿಲ್ಲ
ರಾಷ್ಟ್ರೀಯ ಹೆದ್ದಾರಿ 66ರ ಸನಿಹದಲ್ಲೇ ಇರುವ ಉಸ್ಮಾನ್‌ ಅವರ ಮನೆಯ ಆವರಣದಲ್ಲೇ ಕೆಲಸದವರ ಮನೆಯಿದೆ. ಮನೆಯ ಪಕ್ಕದಲ್ಲೇ ಸಹೋದರನ ಮನೆಯೂ ಇದೆ. ಇಷ್ಟಾದರೂ ಅವರ ಮನೆಯಲ್ಲಿ ಕಳ್ಳತನ ನಡೆದಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಪೊಲೀಸರಿಂದ ಸೂಚನೆ
ತಿಂಗಳುಗಟ್ಟಲೆ ಮನೆಯಿಂದ ಹೊರಗೆ ಹೋಗುವಾಗ ಪೊಲೀಸ್‌ ಠಾಣೆ ಅಥವಾ ಬೀಟ್‌ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಆ ಮನೆಯ ಮೇಲೆ ವಿಶೇಷ ನಿಗಾ ಇರಿಸಲು ಸಾಧ್ಯವಾಗುತ್ತದೆ. ಅಂತಹ ಮನೆಗಳಿಗೆ ಮನೆಯವರು ಸಿಸಿ ಕೆಮರಾಗಳನ್ನು ಅಳವಡಿಸಿದರೆ ಕಳ್ಳತನ ಪ್ರಕರಣ ನಡೆಯದಂತೆ ತಡೆಯಲು ಮತ್ತು ಪ್ರಕರಣ ನಡೆದರೆ ಅದನ್ನು ಭೇದಿಸಲು ಸುಲಭವಾಗುತ್ತದೆ ಎಂದು ಕಾಪು ಎಸ್‌ಐ ತೇಜಸ್ವಿ ತಿಳಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

3 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

4 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

4 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

4 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

4 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

7 hours ago