Featured

ಕಾಪು : ಪುರಸಭೆ ಮುಖ್ಯಧಿಕಾರಿ ರಾಯಪ್ಪರಿಂದ ಅಂಗಡಿಗಳ ಮೇಲೆ ದಾಳಿ, ನೂರಾರು ಕೇಜಿ ಪ್ಲಾಸ್ಟಿಕ್ ವಶ

ಕಾಪು: ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದ ತಂಡ ಶನಿವಾರ ಸಂಜೆ ಪೇಟೆಯ ವಿವಿಧ ಅಂಗಡಿಗಳಿಗೆ   ದಾಳಿ ನಡೆಸಿ ಸುಮಾರು 250 ಕೆ.ಜಿ.ಯಷ್ಟು ಪ್ಲಾಸ್ಟಿಕ್‌ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದೆ.

ಉಡುಪಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪುರಸಭೆ ವ್ಯಾಪ್ತಿಯಲ್ಲಿ ಕಡ್ಡಾಯ ಪ್ಲಾಸ್ಟಿಕ್‌ ನಿಷೇಧ ಕಾನೂನು ಜಾರಿಗೆ ತರಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ರಾಯಪ್ಪ ಅವರು ಆರೋಗ್ಯಾಧಿಕಾರಿ ಸಹಿತ ಪೌರ ಕಾರ್ಮಿಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾ ರೆ.

ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ ಆದೇಶ ಹೊರಡಿಸ ಲಾಗಿದ್ದರೂ, ಅದನ್ನು ಉಲ್ಲಂಘಿಸಿ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ ಅಂಗಡಿಗಳ ಮೇಲೆ  ದಾಳಿ ಮಾಡಲಾಗಿದೆ. ಪ್ಲಾಸ್ಟಿಕ್‌ ಕೈಚೀಲಗಳನ್ನು ಬಳಸುತ್ತಿದ್ದ ಅಂಗಡಿಗಳ ಮಾಲಕರಿಂದ 3,000 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.

ಪ್ಲಾಸ್ಟಿಕ್‌ಚೀಲ ಬದಲಿಗೆ ಬಟ್ಟೆ ಚೀಲ ನೀಡಿದ ಮುಖ್ಯಾಧಿಕಾರಿ ಪೇಟೆಯ ವಿವಿಧೆಡೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಾಚರಣೆ ನಡೆಸಿದ ಮುಖ್ಯಾಧಿಕಾರಿ, ಪ್ಲಾಸ್ಟಿಕ್‌ ಚೀಲಗಳಲ್ಲಿ ಸಾಮಗ್ರಿ ಕೊಂಡೊಯ್ಯುತ್ತಿದ್ದವರನ್ನು ನಿಲ್ಲಿಸಿ, ಅವರಿಗೆ  ಬಟ್ಟೆ ಚೀಲಗಳನ್ನು ನೀಡಿ ಪ್ಲಾಸ್ಟಿಕ್‌ ಬಳಸದಂತೆ ಜಾಗೃತಿ ಮೂಡಿಸಿದರು.

 

Vishwa News 24

Recent Posts

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ -vishwanews24

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…

27 minutes ago

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…

32 minutes ago

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

6 hours ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

6 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

6 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

6 hours ago