Featured

ಕಾಪು : ಪುರಸಭೆ ಮುಖ್ಯಧಿಕಾರಿ ರಾಯಪ್ಪರಿಂದ ಅಂಗಡಿಗಳ ಮೇಲೆ ದಾಳಿ, ನೂರಾರು ಕೇಜಿ ಪ್ಲಾಸ್ಟಿಕ್ ವಶ

ಕಾಪು: ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದ ತಂಡ ಶನಿವಾರ ಸಂಜೆ ಪೇಟೆಯ ವಿವಿಧ ಅಂಗಡಿಗಳಿಗೆ   ದಾಳಿ ನಡೆಸಿ ಸುಮಾರು 250 ಕೆ.ಜಿ.ಯಷ್ಟು ಪ್ಲಾಸ್ಟಿಕ್‌ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದೆ.

ಉಡುಪಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪುರಸಭೆ ವ್ಯಾಪ್ತಿಯಲ್ಲಿ ಕಡ್ಡಾಯ ಪ್ಲಾಸ್ಟಿಕ್‌ ನಿಷೇಧ ಕಾನೂನು ಜಾರಿಗೆ ತರಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ರಾಯಪ್ಪ ಅವರು ಆರೋಗ್ಯಾಧಿಕಾರಿ ಸಹಿತ ಪೌರ ಕಾರ್ಮಿಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾ ರೆ.

ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ ಆದೇಶ ಹೊರಡಿಸ ಲಾಗಿದ್ದರೂ, ಅದನ್ನು ಉಲ್ಲಂಘಿಸಿ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ ಅಂಗಡಿಗಳ ಮೇಲೆ  ದಾಳಿ ಮಾಡಲಾಗಿದೆ. ಪ್ಲಾಸ್ಟಿಕ್‌ ಕೈಚೀಲಗಳನ್ನು ಬಳಸುತ್ತಿದ್ದ ಅಂಗಡಿಗಳ ಮಾಲಕರಿಂದ 3,000 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.

ಪ್ಲಾಸ್ಟಿಕ್‌ಚೀಲ ಬದಲಿಗೆ ಬಟ್ಟೆ ಚೀಲ ನೀಡಿದ ಮುಖ್ಯಾಧಿಕಾರಿ ಪೇಟೆಯ ವಿವಿಧೆಡೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಾಚರಣೆ ನಡೆಸಿದ ಮುಖ್ಯಾಧಿಕಾರಿ, ಪ್ಲಾಸ್ಟಿಕ್‌ ಚೀಲಗಳಲ್ಲಿ ಸಾಮಗ್ರಿ ಕೊಂಡೊಯ್ಯುತ್ತಿದ್ದವರನ್ನು ನಿಲ್ಲಿಸಿ, ಅವರಿಗೆ  ಬಟ್ಟೆ ಚೀಲಗಳನ್ನು ನೀಡಿ ಪ್ಲಾಸ್ಟಿಕ್‌ ಬಳಸದಂತೆ ಜಾಗೃತಿ ಮೂಡಿಸಿದರು.

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

18 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

20 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

20 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

20 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

20 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

20 hours ago