ಕಾಪು ಪೊಲೀಸರ ಕಾರ್ಯಾಚರಣೆ: ಇಬ್ಬರು ಅಂತರ್‌ಜಿಲ್ಲಾ ಸರಗಳ್ಳರ ಸೆರೆ – Vishwanews24

Featured, ಉಡುಪಿ

ಕಾಪು: ಕಳೆದ ಸೋಮವಾರಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್‌ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಸೋಮವಾರ ಪಡುಬಿದ್ರಿಯಲ್ಲಿ ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಎಂ. ಹಾಕೆ ಮಚ್ಚೀಂದ್ರ ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಿ.ಸಿ.ರೋಡ್‌ ಬಂಟ್ವಾಳ ನಿವಾಸಿ ಮಹಮ್ಮದ್‌ ರಫೀಕ್‌ (33) ಮತ್ತು ಸುರತ್ಕಲ್‌ ಚೊಕ್ಕಬೆಟ್ಟು ನಿವಾಸಿ ತೌಸಿಫ್ ಸಾಧಿಕ್‌ (31) ನನ್ನು ಬಂಧಿಸಲಾಗಿದೆ. ಅವರಿಂದ ಕೃತ್ಯಕ್ಕೆ ಬಳಸಿದ ಎವೆಂಜರ್‌ ಬೈಕ್‌, 3 ಮೊಬೈಲ್‌, 2,500 ರೂ. ನಗದು, ಬಟನ್‌ ಇದ್ದ ಎರಡು ಚೂರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಮುಂಬಯಿ : ಸುಂದರವಾಗಿ ಕಾಣಬೇಕೆಂದು 17,500 ಕೊಟ್ಟು ಫೇಷಿಯಲ್ ಮಾಡಿ ಮುಖದ ಚರ್ಮ ಸುಟ್ಟಿಸಿಕೊಂಡ ಮಹಿಳೆ – Vishwanews24

ಕಾರ್ಕಳ ಮತ್ತು ಉಡುಪಿ ಪೊಲೀಸ್‌ ಉಪಾಧೀಕ್ಷಕರು, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಅವರ ನೇತೃತ್ವದಲ್ಲಿ ಹಿರಿಯಡಕ ಎಸ್‌ಐ ಮಂಜುನಾಥ ಮರಬಂದ ಹಾಗೂ ಅಪರಾಧ ವಿಭಾಗದ ಸಿಬಂದಿಗಳಾದ ಪ್ರವೀಣ್‌ ಕುಮಾರ್‌, ರಾಜೇಶ್‌, ನಾರಾಯಣ್‌, ಸಂದೇಶ್‌,ಆರ್‌ಡಿಸಿ ವಿಭಾಗದ ದಿನೇಶ್‌ ಮತ್ತು ನಿತಿನ್‌ ಅವರ ಕಾರ್ಯಾಚರಣೆಯಿಂದಾಗಿ ಸರಗಳ್ಳರ ಬಂಧನವಾಗಿದ್ದು ಪೊಲೀಸರಿಗೆ ನಗದು ಮತ್ತು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುವುದು ಎಂದರು.

 

Leave a Reply