ಕಾಪು: ಕಳೆದ ಸೋಮವಾರಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಸೋಮವಾರ ಪಡುಬಿದ್ರಿಯಲ್ಲಿ ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಮಚ್ಚೀಂದ್ರ ಅವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಿ.ಸಿ.ರೋಡ್ ಬಂಟ್ವಾಳ ನಿವಾಸಿ ಮಹಮ್ಮದ್ ರಫೀಕ್ (33) ಮತ್ತು ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ತೌಸಿಫ್ ಸಾಧಿಕ್ (31) ನನ್ನು ಬಂಧಿಸಲಾಗಿದೆ. ಅವರಿಂದ ಕೃತ್ಯಕ್ಕೆ ಬಳಸಿದ ಎವೆಂಜರ್ ಬೈಕ್, 3 ಮೊಬೈಲ್, 2,500 ರೂ. ನಗದು, ಬಟನ್ ಇದ್ದ ಎರಡು ಚೂರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಕಾರ್ಕಳ ಮತ್ತು ಉಡುಪಿ ಪೊಲೀಸ್ ಉಪಾಧೀಕ್ಷಕರು, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಅವರ ನೇತೃತ್ವದಲ್ಲಿ ಹಿರಿಯಡಕ ಎಸ್ಐ ಮಂಜುನಾಥ ಮರಬಂದ ಹಾಗೂ ಅಪರಾಧ ವಿಭಾಗದ ಸಿಬಂದಿಗಳಾದ ಪ್ರವೀಣ್ ಕುಮಾರ್, ರಾಜೇಶ್, ನಾರಾಯಣ್, ಸಂದೇಶ್,ಆರ್ಡಿಸಿ ವಿಭಾಗದ ದಿನೇಶ್ ಮತ್ತು ನಿತಿನ್ ಅವರ ಕಾರ್ಯಾಚರಣೆಯಿಂದಾಗಿ ಸರಗಳ್ಳರ ಬಂಧನವಾಗಿದ್ದು ಪೊಲೀಸರಿಗೆ ನಗದು ಮತ್ತು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುವುದು ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…