ಕಾಪು: ಕಳೆದ ಸೋಮವಾರಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಸೋಮವಾರ ಪಡುಬಿದ್ರಿಯಲ್ಲಿ ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಮಚ್ಚೀಂದ್ರ ಅವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಿ.ಸಿ.ರೋಡ್ ಬಂಟ್ವಾಳ ನಿವಾಸಿ ಮಹಮ್ಮದ್ ರಫೀಕ್ (33) ಮತ್ತು ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ತೌಸಿಫ್ ಸಾಧಿಕ್ (31) ನನ್ನು ಬಂಧಿಸಲಾಗಿದೆ. ಅವರಿಂದ ಕೃತ್ಯಕ್ಕೆ ಬಳಸಿದ ಎವೆಂಜರ್ ಬೈಕ್, 3 ಮೊಬೈಲ್, 2,500 ರೂ. ನಗದು, ಬಟನ್ ಇದ್ದ ಎರಡು ಚೂರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಕಾರ್ಕಳ ಮತ್ತು ಉಡುಪಿ ಪೊಲೀಸ್ ಉಪಾಧೀಕ್ಷಕರು, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಅವರ ನೇತೃತ್ವದಲ್ಲಿ ಹಿರಿಯಡಕ ಎಸ್ಐ ಮಂಜುನಾಥ ಮರಬಂದ ಹಾಗೂ ಅಪರಾಧ ವಿಭಾಗದ ಸಿಬಂದಿಗಳಾದ ಪ್ರವೀಣ್ ಕುಮಾರ್, ರಾಜೇಶ್, ನಾರಾಯಣ್, ಸಂದೇಶ್,ಆರ್ಡಿಸಿ ವಿಭಾಗದ ದಿನೇಶ್ ಮತ್ತು ನಿತಿನ್ ಅವರ ಕಾರ್ಯಾಚರಣೆಯಿಂದಾಗಿ ಸರಗಳ್ಳರ ಬಂಧನವಾಗಿದ್ದು ಪೊಲೀಸರಿಗೆ ನಗದು ಮತ್ತು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುವುದು ಎಂದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…