Featured

ಕಾಪು ಪೊಲೀಸ್ ಠಾಣೆ ERSS ತುರ್ತು ವಾಹನ‌ ಜಾಗೃತಿ ಜಾಥ.-vishwanews24

ಕಾಪು ಪೊಲೀಸ್ ಠಾಣೆ ERSS ತುರ್ತು ವಾಹನ‌ ಜಾಗೃತಿ ಜಾಥ

ಕಾಪು : ಒಂದು ಭಾರತ ಒಂದು ತುರ್ತುಕರೆ ಸಂಖ್ಯೆ ಪರಿಕಲ್ಪನೆಯಡಿ ಕರ್ನಾಟಕದಲ್ಲಿ 112 ಸಹಾಯವಾಣಿಯನ್ನು ಆರಂಭಿಸಲಾಗಿದೆ. 112 ಗೆ ಕರೆ ಮಾಡಿದರೆ ನೇರವಾಗಿ ಜಿಲ್ಲಾ ಸಮನ್ವಯ ಕೇಂದ್ರದೊಂದಿಗೆ ಸಂಪರ್ಕ ಕಲ್ಪಿಸಲಾಗುತ್ತದೆ. ಈ ಸಂಖ್ಯೆಗೆ ಕರೆ ಮಾಡುವ ಮೂಲಕ ಪೊಲೀಸ್, ಅಗ್ನಿಶಾಮಕ, ಮತ್ತು ಆರೋಗ್ಯ ಮುಂತಾದ ಸೇವೆ ಪಡೆಯಬಹುದು. ERSS ವೆಬ್ ಸೈಟ್ ಗೆ ಭೇಟಿ ನೀಡಿ E mailಮೂಲಕ ದೂರನ್ನು ದಾಖಲಿಸಬಹುದು ಎಂಬುದರ ಕುರಿತಾದ ಜಾಗೃತಿ ಜಾಥ ಕಾಪು‌ ಪೋಲಿಸ್ ಠಾಣೆಯ ವತಿಯಿಂದ ಆದಿತ್ಯವಾರ ನಡೆಯಿತು.
ಕರೆ ಮಾಡುವುದು ಹೇಗೆ
ಸಾಮಾನ್ಯ ಫೋನ್ ನಿಂದ 112 ಡಯಲ್ ಮಾಡಬೇಕು. ಸಾಮಾನ್ಯ ಫೋನ್ ಗಳಲ್ಲಿ 5 ಅಥವಾ 9 ಬಟನ್ ದೀರ್ಘವಾಗಿ ಒತ್ತಿದರೆ ಕರೆ ಸಕ್ರಿಯವಾಗುತ್ತದೆ. ಸ್ಮಾರ್ಟ್ ಫೋನ್ ಮೂಲಕ 112 ಸಂಖ್ಯೆಗೆ ಕರೆ ಪೊಲೀಸ್ಮಾಡಬಹುದು. ಅಥವಾ ಪವರ್ ಬಟನ್ ಮೂರು ಬಾರಿ ಒತ್ತಿದರೆ ತಕ್ಷಣ ERSS ಸಕ್ರಿಯವಾಗುತ್ತದೆ. ನಾಗರಿಕರಿಗೆ 24×7 ತುರ್ತು ಪ್ರಕ್ರಿಯೆ, ಬೆಂಬಲ ಸೇವೆಗಳು, ಸೇವಾ ವಿನಂತಿದಾರರ ಸ್ವಯಂ ಚಾಲಿತ ಸ್ಥಳ ಗುರುತಿಸುವಿಕೆ, ತುರ್ತು ಸ್ಪಂದನ ವಾಹನಗಳು, ನೇರ ಪತ್ತೆಯ ವ್ಯವಸ್ಥೆಗೆ ಅನೂಕೂಲಗಳಾಗಿವೆ. .

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago