Featured

ಕಾಪು:  ಪ್ರತ್ಯೇಕ ಪ್ರಕರಣ – ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ – vishwanews24

ಕಾಪು:  ಪ್ರತ್ಯೇಕ ಪ್ರಕರಣ – ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

ಕಾಪು: ಪ್ರತ್ಯೇಕ ಪ್ರಕರಣಗಳಲ್ಲಿ ಮಹೀಂದ್ರಾ ಪಿಕಪ್ ವಾಹನ ಮತ್ತು ಮಾರುತಿ ಆಮ್ನಿ ಕಾರಿನಲ್ಲಿ 2 ಹಸು ಮತ್ತು ಕರುವೊಂದನ್ನು ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿಸುತ್ತಿರುವುದನ್ನು ಕಾಪು ಪೊಲೀಸರು ಮಣಿಪುರ ದೆಂದೂರಕಟ್ಟೆ ಚೆಕ್ ಪೋಸ್ಟ್ ಬಳಿ ರವಿವಾರ ಮಧ್ಯಾಹ್ನ ಪತ್ತೆ ಹಚ್ಚಿದ್ದಾರೆ.

ಕಟಪಾಡಿಯಿಂದ ಮಣಿಪುರಕ್ಕೆ ಬರುತ್ತಿದ್ದ ಪಿಕಪ್ ವಾಹನವನ್ನು ಕಾಪು ಎಸ್ಸೈ ಅಬ್ದುಲ ಖಾದರ್ ನೇತೃತ್ವದಲ್ಲಿ ದೆಂದೂರಕಟ್ಟೆ ಬಳಿಯ ಚೆಕ್‌ಪೋಸ್ಟ್ ತಪಾಸಣೆಗೊಳಪಡಿಸಿದ್ದು ಈ ವೇಳೆ ಕ್ಯಾಬಿನ್‌ನ ಹಿಂಬದಿಯಲ್ಲಿ ಗಿರ್ ತಳಿಯ 2 ದೇಸಿ ಹಸುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿದೆ.

ಈ ಬಗ್ಗೆ ವಾಹನ ಚಾಲಕ ಕನಕಪ್ಪ ವೈ. ಮತ್ತು ಮಾಲಕಿ ಗೀತಾ ಅವರನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ನಿಬಂಧನೆಗಳನ್ನು ಉಲ್ಲಂಘಿಸಿ ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ದನಗಳನ್ನು ತುಂಬಿಸಿಕೊಂಡು ಸಾಗಿಸುತ್ತಿರುವ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮಾರುತಿ ಆಮ್ನಿ ಕಾರಿನಲ್ಲಿ ಗಂಡು ಕರುವೊಂದನ್ನು ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿಸುತ್ತಿರುವುದನ್ನು ರವಿವಾರ ಸಂಜೆ ಪತ್ತೆ ಹಚ್ಚಿದ್ದಾರೆ.

ಮಣಿಪಾಲದ ಕಡೆಯಿಂದ ಬಂದ ಮಾರುತಿ ಆಮ್ನಿ ಕಾರಿನಲ್ಲಿ ಆಪಾದಿತ ಪ್ರಶಾಂತ್ ಎಂಬಾತ ಹಿಂಬದಿಯ ಸೀಟ್ ಗಳನ್ನು ಮಡಚಿ 1 ಗಂಡು ಕರುವನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಕುತ್ತಿಗೆಗೆ ಬಿಗಿಯಾಗಿ ಹಗ್ಗವನ್ನು ಕಟ್ಟಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ವಾಹನದ ಪರವಾನಿಗೆಯ ನಿಬಂಧನೆಗಳನ್ನು ಉಲ್ಲಂಘಿಸಿ ಹಿಂಸಾತ್ಮಕ ರೀತಿಯಲ್ಲಿ ಕರುವನ್ನು ವಾಹನದಲ್ಲಿ ತುಂಬಿಸಲಾಗಿದ್ದು ಕರು ಮತ್ತು ಆಮ್ನಿ ಕಾರನ್ನು ಸ್ವಾಧೀನಪಡಿಸಿಕೊಂಡು ಚಾಲಕ ಪ್ರಶಾಂತ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎರಡೂ ಪ್ರಕರಣಗಳಿಗೆ ಸಂಬಂಧಿಸಿ ಪಂಚರುಗಳ ಸಮಕ್ಷಮದಲ್ಲಿ ಮಹಜರು ನಡೆಸಲಾಗಿದ್ದು ಪ್ರಾಣಿ ಹಿಂಸೆ ಪ್ರತಿಬಂಧಕ ಕಾಯಿದೆ-1960 ರಂತೆ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago