Featured

ಕಾಪು:  ಪ್ರತ್ಯೇಕ ಪ್ರಕರಣ – ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ – vishwanews24

ಕಾಪು:  ಪ್ರತ್ಯೇಕ ಪ್ರಕರಣ – ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

ಕಾಪು: ಪ್ರತ್ಯೇಕ ಪ್ರಕರಣಗಳಲ್ಲಿ ಮಹೀಂದ್ರಾ ಪಿಕಪ್ ವಾಹನ ಮತ್ತು ಮಾರುತಿ ಆಮ್ನಿ ಕಾರಿನಲ್ಲಿ 2 ಹಸು ಮತ್ತು ಕರುವೊಂದನ್ನು ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿಸುತ್ತಿರುವುದನ್ನು ಕಾಪು ಪೊಲೀಸರು ಮಣಿಪುರ ದೆಂದೂರಕಟ್ಟೆ ಚೆಕ್ ಪೋಸ್ಟ್ ಬಳಿ ರವಿವಾರ ಮಧ್ಯಾಹ್ನ ಪತ್ತೆ ಹಚ್ಚಿದ್ದಾರೆ.

ಕಟಪಾಡಿಯಿಂದ ಮಣಿಪುರಕ್ಕೆ ಬರುತ್ತಿದ್ದ ಪಿಕಪ್ ವಾಹನವನ್ನು ಕಾಪು ಎಸ್ಸೈ ಅಬ್ದುಲ ಖಾದರ್ ನೇತೃತ್ವದಲ್ಲಿ ದೆಂದೂರಕಟ್ಟೆ ಬಳಿಯ ಚೆಕ್‌ಪೋಸ್ಟ್ ತಪಾಸಣೆಗೊಳಪಡಿಸಿದ್ದು ಈ ವೇಳೆ ಕ್ಯಾಬಿನ್‌ನ ಹಿಂಬದಿಯಲ್ಲಿ ಗಿರ್ ತಳಿಯ 2 ದೇಸಿ ಹಸುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿದೆ.

ಈ ಬಗ್ಗೆ ವಾಹನ ಚಾಲಕ ಕನಕಪ್ಪ ವೈ. ಮತ್ತು ಮಾಲಕಿ ಗೀತಾ ಅವರನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ನಿಬಂಧನೆಗಳನ್ನು ಉಲ್ಲಂಘಿಸಿ ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ದನಗಳನ್ನು ತುಂಬಿಸಿಕೊಂಡು ಸಾಗಿಸುತ್ತಿರುವ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮಾರುತಿ ಆಮ್ನಿ ಕಾರಿನಲ್ಲಿ ಗಂಡು ಕರುವೊಂದನ್ನು ಹಿಂಸಾತ್ಮಕವಾಗಿ ಕಟ್ಟಿಕೊಂಡು ಸಾಗಿಸುತ್ತಿರುವುದನ್ನು ರವಿವಾರ ಸಂಜೆ ಪತ್ತೆ ಹಚ್ಚಿದ್ದಾರೆ.

ಮಣಿಪಾಲದ ಕಡೆಯಿಂದ ಬಂದ ಮಾರುತಿ ಆಮ್ನಿ ಕಾರಿನಲ್ಲಿ ಆಪಾದಿತ ಪ್ರಶಾಂತ್ ಎಂಬಾತ ಹಿಂಬದಿಯ ಸೀಟ್ ಗಳನ್ನು ಮಡಚಿ 1 ಗಂಡು ಕರುವನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಕುತ್ತಿಗೆಗೆ ಬಿಗಿಯಾಗಿ ಹಗ್ಗವನ್ನು ಕಟ್ಟಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ವಾಹನದ ಪರವಾನಿಗೆಯ ನಿಬಂಧನೆಗಳನ್ನು ಉಲ್ಲಂಘಿಸಿ ಹಿಂಸಾತ್ಮಕ ರೀತಿಯಲ್ಲಿ ಕರುವನ್ನು ವಾಹನದಲ್ಲಿ ತುಂಬಿಸಲಾಗಿದ್ದು ಕರು ಮತ್ತು ಆಮ್ನಿ ಕಾರನ್ನು ಸ್ವಾಧೀನಪಡಿಸಿಕೊಂಡು ಚಾಲಕ ಪ್ರಶಾಂತ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎರಡೂ ಪ್ರಕರಣಗಳಿಗೆ ಸಂಬಂಧಿಸಿ ಪಂಚರುಗಳ ಸಮಕ್ಷಮದಲ್ಲಿ ಮಹಜರು ನಡೆಸಲಾಗಿದ್ದು ಪ್ರಾಣಿ ಹಿಂಸೆ ಪ್ರತಿಬಂಧಕ ಕಾಯಿದೆ-1960 ರಂತೆ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago