Featured

ಕಾಪು ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸದನದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ  – vishwanews24

ಕಾಪು ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸದನದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

ಬೆಳಗಾವಿ/ಕಾಪು: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದ್ದು, 1 ಜಿಲ್ಲೆ 1 ತಾಣ ಅಭಿವೃದ್ಧಿಯಡಿ ಕಾಪು ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರಕಾರ ಅನುದಾನ ಒದಗಿಸಬೇಕು ಎಂದು ಶಾಸಕ ಗುರ್ಮೆ ಶೆಟ್ಟಿ ಬೆಳಗಾವಿ ಸುವರ್ಣ ಸೌಧ’ದಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭ ಸದನದಲ್ಲಿ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಅಧಿವೇಶನದ ಚುಕ್ಕೆ ಗುರುತಿನ ಸಂಖ್ಯೆ 380 ರಡಿ ಈ ಕುರಿತು ರಾಜ್ಯ ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನಾ ಶಾಸ್ತ್ರ ಇಲಾಖೆಯ ಸಚಿವ ಹೆಚ್.ಕೆ.ಪಾಟೀಲ್ ಅವರಿಗೆ ಮನವಿ ಮಾಡುತ್ತಾ ನಾನು ಸತತ 3 ನೇ ಬಾರಿಗೆ ತಮ್ಮಲ್ಲಿ ಮನವಿ ಮಾಡುತ್ತಿದ್ದೇನೆ. ಕಾಪು ಕ್ಷೇತ್ರದಲ್ಲಿ ಮಾರಿಗುಡಿ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಮತ್ತು ಅಂತರಾಷ್ಟ್ರೀಯ ಮನ್ನಣೆ ಪಡೆದ ಲೈಟ್ ಹೌಸ್, ಬ್ಲೂ ಫ್ಲಾಗ್ ಬೀಚ್ ಸಹಿತ ಹಲವಾರು ಧಾರ್ಮಿಕ ಮತ್ತು ಪ್ರವಾಸೋದ್ಯಮ ಸ್ಥಳಗಳಿವೆ. ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಮಂದಿ ಪ್ರವಾಸಿಗರು ಬರುತ್ತಿದ್ದಾರೆ. 1 ಜಿಲ್ಲೆ 1 ತಾಣ ಯೋಜನೆಯಡಿ ಕಾಪು ಕ್ಷೇತ್ರವನ್ನು ನಿಗದಿಗೊಳಿಸಿ, ಪ್ರವಾಸಿ ತಾಣದ ಅಭಿವೃದ್ಧಿಗೆ 5 ಕೋಟಿ ಹಣ ಬಿಡುಗಡೆ ಮಾಡುವುದಾಗಿ ಪ್ರಥಮ ಅಧಿವೇಶನದಲ್ಲೇ ಭರವಸೆ ನೀಡಿದ್ದೀರಿ. ಇದುವರೆಗೂ ಹಣ ಬಿಡುಗಡೆ ಆಗಿಲ್ಲ. ಹಣ ಬಿಡುಗಡೆ ಮಾಡಿದರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅನುಕೂಲವಾಗುತ್ತದೆ. ಈ ಕುರಿತು ಕೇಂದ್ರ ಸರಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago