ಬೆಳಗಾವಿ/ಕಾಪು: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದ್ದು, 1 ಜಿಲ್ಲೆ 1 ತಾಣ ಅಭಿವೃದ್ಧಿಯಡಿ ಕಾಪು ಕ್ಷೇತ್ರದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರಕಾರ ಅನುದಾನ ಒದಗಿಸಬೇಕು ಎಂದು ಶಾಸಕ ಗುರ್ಮೆ ಶೆಟ್ಟಿ ಬೆಳಗಾವಿ ಸುವರ್ಣ ಸೌಧ’ದಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭ ಸದನದಲ್ಲಿ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಕರ್ನಾಟಕ ವಿಧಾನಸಭೆ ಅಧಿವೇಶನದ ಚುಕ್ಕೆ ಗುರುತಿನ ಸಂಖ್ಯೆ 380 ರಡಿ ಈ ಕುರಿತು ರಾಜ್ಯ ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನಾ ಶಾಸ್ತ್ರ ಇಲಾಖೆಯ ಸಚಿವ ಹೆಚ್.ಕೆ.ಪಾಟೀಲ್ ಅವರಿಗೆ ಮನವಿ ಮಾಡುತ್ತಾ ನಾನು ಸತತ 3 ನೇ ಬಾರಿಗೆ ತಮ್ಮಲ್ಲಿ ಮನವಿ ಮಾಡುತ್ತಿದ್ದೇನೆ. ಕಾಪು ಕ್ಷೇತ್ರದಲ್ಲಿ ಮಾರಿಗುಡಿ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಮತ್ತು ಅಂತರಾಷ್ಟ್ರೀಯ ಮನ್ನಣೆ ಪಡೆದ ಲೈಟ್ ಹೌಸ್, ಬ್ಲೂ ಫ್ಲಾಗ್ ಬೀಚ್ ಸಹಿತ ಹಲವಾರು ಧಾರ್ಮಿಕ ಮತ್ತು ಪ್ರವಾಸೋದ್ಯಮ ಸ್ಥಳಗಳಿವೆ. ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಮಂದಿ ಪ್ರವಾಸಿಗರು ಬರುತ್ತಿದ್ದಾರೆ. 1 ಜಿಲ್ಲೆ 1 ತಾಣ ಯೋಜನೆಯಡಿ ಕಾಪು ಕ್ಷೇತ್ರವನ್ನು ನಿಗದಿಗೊಳಿಸಿ, ಪ್ರವಾಸಿ ತಾಣದ ಅಭಿವೃದ್ಧಿಗೆ 5 ಕೋಟಿ ಹಣ ಬಿಡುಗಡೆ ಮಾಡುವುದಾಗಿ ಪ್ರಥಮ ಅಧಿವೇಶನದಲ್ಲೇ ಭರವಸೆ ನೀಡಿದ್ದೀರಿ. ಇದುವರೆಗೂ ಹಣ ಬಿಡುಗಡೆ ಆಗಿಲ್ಲ. ಹಣ ಬಿಡುಗಡೆ ಮಾಡಿದರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅನುಕೂಲವಾಗುತ್ತದೆ. ಈ ಕುರಿತು ಕೇಂದ್ರ ಸರಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…