ಕಾಪು: ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಕಾಪು ಪೇಟೆಯಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಕಪ್ಪ ಎ ಮಾತನಾಡಿ ವೈವಿದ್ಯಮಯವಾದ ಸಂಸ್ಕೃತಿ ಭಾಷೆ ಮತ್ತು ಸಂಸ್ಕಾರವನ್ನು ಹೊಂದಿರುವ ಭಾರತದಲ್ಲಿ ಹಿ0ದಿ ಭಾಷೆಗೆ ಮಾತ್ರ ಪ್ರಾಮುಖ್ಯತೆ ಕೊಡುವ ಕೇಂದ್ರ ಸರಕಾರದ ನಿರ್ಧಾರ ಖಂಡನೀಯವಾಗಿದೆ.ಈ ಬಗ್ಗೆ ಜನರೆಲ್ಲರೂ ಜಾಗೃತರಾಗಬೇಕಿದೆ ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಮಾತನಾಡಿ ರಾಜ್ಯದಲ್ಲಿ ಪ್ರಾದೇಶಿಕತೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು,ಇಂತಹ ಸಂದರ್ಭದಲ್ಲಿ ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡುತ್ತಿರುವುದು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರದ ಭಾಷಾ ವಿರೋಧಿ ಕೃತ್ಯವಾಗಿದೆ .ಆಯಾ ರಾಜ್ಯ ಜಿಲ್ಲೆ ಮತ್ತು ಸ್ಥಳೀಯ ಪ್ರದೇಶಗಳ ಭಾಷೆಗಳಿಗೆ ಒತ್ತು ನೀಡಿದ್ದಲ್ಲಿ ರಾಜ್ಯಕ್ಕೂ ದೇಶಕ್ಕೂ ಒಳಿತಾಗುತ್ತದೆ. ಹಿಂದೀ ಭಾಷೆಯನ್ನು ಹೇರುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯನ್ನು ಉಂಟು ಮಾಡಲಾಗುತ್ತಿದೆ.
ಇದರ ವಿರುದ್ಧ ಸಂಘಟಿತ ಹೋರಾಟ ನಡೆಯಬೇಕಿದೆ ಎಂದು ಅವರು ಹೇಳಿದರು.
ಪ್ರತಿಭಟನೆಯಲ್ಲಿ ಪುರಸಭಾ ಸದಸ್ಯ ಉಮೇಶ್ ಪೂಜಾರಿ ಮಲ್ಲಾರ್, ಭರತ್ ಶೆಟ್ಟಿ, ಜಯರಾಮ ಆಚಾರ್ಯ, ಸುಧಾಕರ ಶೆಟ್ಟಿ ಹೆಜಮಾಡಿ,ಇಕ್ಬಾಲ್ ಆತ್ರಾಡಿ, ವೆಂಕಟೇಶ ಪಡುಬಿದ್ರಿ, ಇಸ್ಮಾಯಿಲ್ ಕರ್ನಿರೆ ,ಹುಸೇನ್ ಹೈಕಾಡಿ,ಮೊದಲಾದವರು ಉಪಸ್ಥಿತರಿದ್ದರು.
ದ.ಕ.ದಲ್ಲಿ ಸೆ. 26ರಿಂದ ಅ.10ರ ವರೆಗೆ ದಸರಾ ರಜೆ – ಉಡುಪಿಯಲ್ಲಿ ಅ.3ರಿಂದ 16ರ ವರೆಗೆ ರಜೆ – Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…