ಕಾಪು: ಕಾಪು ಪುರಸಭೆ ವ್ಯಾಪ್ತಿ ಹಾಗೂ ತಾಲೂಕಿನ ಫಲಾನುಭವಿಗಳಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಅವರು, ಕಾಪು ಪುರಸಭಾ ವ್ಯಾಪ್ತಿಯಲ್ಲಿ ಆದ್ಯತೆಯ ಮೇರೆಗೆ ಮನೆ ನಿವೇಶನ ಮತ್ತು ಅನುದಾನ ಮಂಜೂರಾತಿ ಪತ್ರ ನೀಡಲಾಗಿದೆ. ದಿವ್ಯಾಂಗರ ಸಮಸ್ಯೆಗೆ ಸ್ಪಂಧಿಸಿ ಸಹಕಾರ ನೀಡಲಾಗುತ್ತಿದೆ. ಇದಕ್ಕಾಗಿ ಪುರಸಭೆಯ ಮೀಸಲು ಹಣವನ್ನು ಬಳಸಿಕೊಳ್ಳಲಾಗುತ್ತಿದ್ದು ಆದ್ಯತೆಯ ಮೇರೆಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದರು.
ಕಾಪು ಪುರಸಭೆಗೆ ನಗರೋತ್ಥಾನ ಯೋಜನೆಯಡಿ 10 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಟೆಂಡರ್ ಹಂತದಲ್ಲಿದೆ. 56 ಕೋಟಿ ರೂಪಾಯಿ ವೆಚ್ಚದಲ್ಲಿ ಕುರ್ಕಾಲು ಡ್ಯಾಂನಿಂದ ಕಾಪು ನಗರಕ್ಕೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಬೆಳಪು ಅತ್ಯಾಧುನಿಕ ವಿಜ್ಞಾನ ತಂತ್ರಜ್ಞಾನ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಹೆಚ್ಚುವರಿ 15 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾಪು ಕ್ಷೇತ್ರದ ಐಟಿಐ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…