12 ಗ್ರಾಮಗಳನ್ನೊಗೊಂಡ ಕಾಪು ಬಂಟರ ಸಂಘ (ರಿ) ಇದರ ನಿರ್ದೇಶಕರ ಸಭೆಯು ಸಂಘದ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ ನೇತೃತ್ವದಲ್ಲಿ 4_02_2024 ರಂದು ನಡೆಯಿತು. ಈ ಸಭೆಯಲ್ಲಿ ಲೀಲಾಧರ ಶೆಟ್ಟಿಯವರ ಅಗಲುವಿಕೆಯಿಂದ ತೆರವಾದ ಕಾರ್ಯದರ್ಶಿ ಸ್ಥಾನಕ್ಕೆ ಸೂಕ್ತವಾದ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಉದ್ಯಮಿ ಹಾಗೂ ತನ್ನ ಕಾಲೇಜು ದಿನಗಳಿಂದಲೇ ನಾಯಕರಾಗಿರುವ ಯೊಗೀಶ್ ವಿ. ಶೆಟ್ಟಿ ಬಾಲಾಜಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು
ತೆರವಾದ ಜೊತೆ ಕೋಶಾಧಿಕಾರಿ ಸ್ಥಾನಕ್ಕೆ ಸಮಾಜ ಸೇವಕ ಕಳತ್ತೂರು ದಿವಾಕರ ಡಿ. ಶೆಟ್ಟಿಯವರನ್ನು ಸರ್ವಾನುಮತದೊಂದಿಗೆ ಆಯ್ಕೆ ಮಾಡಲಾಯಿತು.
ಪದಗ್ರಹಣ ಸಂದರ್ಭದಲ್ಲಿ ಎಲ್ಲಾ ನಿರ್ದೇಶಕರ ಸಹಕಾರವನ್ನು ಕೋರಿ ಸಂಘದ ಅಭ್ಯುದಯಕ್ಕಾಗಿ ಶ್ರಮಿಸುವೆವು ಎಂದು ಕಾರ್ಯದರ್ಶಿ ಮತ್ತು ಜೊತೆ ಕೋಶಾಧಿಕಾರಿ ಭರವಸೆ ನೀಡಿದರು.
ಉಪಾಧ್ಯಕ್ಷರುಗಳಾದ ಪಂಜಿತ್ತೂರು ಗುತ್ತು ರವಿರಾಜ್ ಶೆಟ್ಟಿ, ನಡಿಕೆರೆ ರತ್ನಾಕರ ಶೆಟ್ಟಿ, ದೊರೆಗಳ ಗುತ್ತು ಬಾಲಕೃಷ್ಣ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಹೆಗ್ಡೆ ಕಲ್ಯಾ ಬೀಡು ಉಪಸ್ಥಿತರಿದ್ದರು. ಉಳಿಯಾರಗೋಳಿ, ಪಡು, ಮಲ್ಲಾರು, ಮೂಳೂರು, ಮಜೂರು, ಪಾದೂರು, ಇನ್ನಂಜೆ, ಕಳತ್ತೂರು, ಹೇರೂರು, ಪಾಂಗಳ ಹಾಗೂ ಇನ್ನಿತರ ಗ್ರಾಮಗಳ ನಿರ್ದೇಶಕರು ಹಾಜರಿದ್ದು ಉತ್ತಮ ಸಲಹೆ ಸೂಚನೆ ನೀಡಿದರು. ಜೊತೆ ಕಾರ್ಯದರ್ಶಿ ನಿರ್ಮಲ್ ಕುಮಾರ್ ಹೆಗ್ಡೆ ಸ್ವಾಗತಿಸಿ, ದಿವಾಕರ್ ಡಿ. ಶೆಟ್ಟಿ ವಂದಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…