Featured

ಕಾಪು ಬಂಟರ ಸಂಘ (ರಿ) ಇದರ ನೂತನ ಕಾರ್ಯದರ್ಶಿಯಾಗಿ ಯೊಗೀಶ್ ವಿ. ಶೆಟ್ಟಿ ಬಾಲಾಜಿ ಆಯ್ಕೆ  – vishwanews24

ಕಾಪು ಬಂಟರ ಸಂಘ (ರಿ) ಇದರ ನೂತನ ಕಾರ್ಯದರ್ಶಿಯಾಗಿ ಯೊಗೀಶ್ ವಿ. ಶೆಟ್ಟಿ ಬಾಲಾಜಿ ಆಯ್ಕೆ

12 ಗ್ರಾಮಗಳನ್ನೊಗೊಂಡ ಕಾಪು ಬಂಟರ ಸಂಘ (ರಿ) ಇದರ ನಿರ್ದೇಶಕರ ಸಭೆಯು ಸಂಘದ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ ನೇತೃತ್ವದಲ್ಲಿ 4_02_2024 ರಂದು ನಡೆಯಿತು. ಈ ಸಭೆಯಲ್ಲಿ ಲೀಲಾಧರ ಶೆಟ್ಟಿಯವರ ಅಗಲುವಿಕೆಯಿಂದ ತೆರವಾದ ಕಾರ್ಯದರ್ಶಿ ಸ್ಥಾನಕ್ಕೆ ಸೂಕ್ತವಾದ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಉದ್ಯಮಿ ಹಾಗೂ ತನ್ನ ಕಾಲೇಜು ದಿನಗಳಿಂದಲೇ ನಾಯಕರಾಗಿರುವ ಯೊಗೀಶ್ ವಿ. ಶೆಟ್ಟಿ ಬಾಲಾಜಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು

ತೆರವಾದ ಜೊತೆ ಕೋಶಾಧಿಕಾರಿ ಸ್ಥಾನಕ್ಕೆ ಸಮಾಜ ಸೇವಕ ಕಳತ್ತೂರು ದಿವಾಕರ ಡಿ. ಶೆಟ್ಟಿಯವರನ್ನು ಸರ್ವಾನುಮತದೊಂದಿಗೆ ಆಯ್ಕೆ ಮಾಡಲಾಯಿತು.

ಪದಗ್ರಹಣ ಸಂದರ್ಭದಲ್ಲಿ ಎಲ್ಲಾ ನಿರ್ದೇಶಕರ ಸಹಕಾರವನ್ನು ಕೋರಿ ಸಂಘದ ಅಭ್ಯುದಯಕ್ಕಾಗಿ ಶ್ರಮಿಸುವೆವು ಎಂದು ಕಾರ್ಯದರ್ಶಿ ಮತ್ತು ಜೊತೆ ಕೋಶಾಧಿಕಾರಿ ಭರವಸೆ ನೀಡಿದರು.

ಉಪಾಧ್ಯಕ್ಷರುಗಳಾದ ಪಂಜಿತ್ತೂರು ಗುತ್ತು ರವಿರಾಜ್ ಶೆಟ್ಟಿ, ನಡಿಕೆರೆ ರತ್ನಾಕರ ಶೆಟ್ಟಿ, ದೊರೆಗಳ ಗುತ್ತು ಬಾಲಕೃಷ್ಣ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಹೆಗ್ಡೆ ಕಲ್ಯಾ ಬೀಡು ಉಪಸ್ಥಿತರಿದ್ದರು. ಉಳಿಯಾರಗೋಳಿ, ಪಡು, ಮಲ್ಲಾರು, ಮೂಳೂರು, ಮಜೂರು, ಪಾದೂರು, ಇನ್ನಂಜೆ, ಕಳತ್ತೂರು, ಹೇರೂರು, ಪಾಂಗಳ ಹಾಗೂ ಇನ್ನಿತರ ಗ್ರಾಮಗಳ ನಿರ್ದೇಶಕರು ಹಾಜರಿದ್ದು ಉತ್ತಮ ಸಲಹೆ ಸೂಚನೆ ನೀಡಿದರು. ಜೊತೆ ಕಾರ್ಯದರ್ಶಿ ನಿರ್ಮಲ್ ಕುಮಾರ್ ಹೆಗ್ಡೆ ಸ್ವಾಗತಿಸಿ, ದಿವಾಕರ್ ಡಿ. ಶೆಟ್ಟಿ ವಂದಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago