ಕಾಪು: ನಾಮ ಪತ್ರ ಸಲ್ಲಿಕೆಗೂ ಮುನ್ನ ಕಾಪು ಬಿಜೆಪಿ ಅಭ್ಯರ್ಥಿ ಕಾಪು ಮಾಜಿ ಶಾಸಕ ಲಾಲಜಿ ಆರ್ ಮೆಂಡನ್ ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನ,ಹಾಗೂ ಕಾಪುವಿನ ಮೂರು ಮಾರಿಗುಡಿ ಮತ್ತು ಕಟಪಾಡಿ ಶ್ರೀ ವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.
ತದನಂತರ ಮಾಧ್ಯಮದವರೊಂದಿಗೆ ಮಾತನಾಡಿ” ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ಹದಗೆಟ್ಟು ಹೋಗಿದೆ, ಕಾಪುವಿನ ಶಾಸಕ ವಿನಯ್ ಕುಮಾರ್ ಸೊರಕೆ ಬಂಡವಾಳ ಶಾಹಿಗಳ ಪರ ಧ್ವನಿ ಎತ್ತುತ್ತಿದ್ದಾರೇ ಹೊರತು ಬಡವರ ಬಗ್ಗೆ ಒಂದಿಷ್ಟು ಕಾಳಜಿ ಇಲ್ಲದಂತಾಗಿದೆ. ಸೊರಕೆ ಸೂಟು ಬೂಟಿನ ನಾಟಕದ ರಾಜಕೀಯದಲ್ಲಿ ತೊಡಗಿದ್ದಾರೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಕನಸಾಗಿಯೇ ಉಳಿದಿದೆ,ಪುರಸಭೆ ನಗರಾಭಿವೃದ್ದಿ ಪ್ರಾಧಿಕಾರದಿಂದ ಜನರಿಗೆ ಒಂದು ಪೈಸೆಯ ಲಾಭವಾಗದಿದ್ದರೂ ಅವರ ಚೇಳಗಳನ್ನು ಸಮಾಧಾನ ಪಡಿಸುವ ಉದ್ದೇಶವಾಗಿದೆ.” ಮತ್ತು ಗುರ್ಮೆ ಸುರೇಶ್ ಶೆಟ್ಟಿ ಪ್ರಚಾರಕ್ಕೆ ಬರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಗುರ್ಮೆಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದೇನೆ ಮತ್ತು ಅವರು ನಮ್ಮ ಪಕ್ಷದ ನಾಯಕರು,ಮುಂದಿನ ದಿನದಲ್ಲಿ ಅವರಿಗೂ ಪಕ್ಷ ಉನ್ನತ ಸ್ಥಾನಮಾನ ನೀಡುವುದರಲ್ಲಿ ಯಾವುದೆ ಅನುಮಾನವಿಲ್ಲ ಮತ್ತು ಪ್ರಚಾರ ಕಾರ್ಯದಲ್ಲಿ ಅವರು ಸಕ್ರೀಯರಾಗಿ ಭಾಗವಹಿಸುವ ನಿರೀಕ್ಷೆಯಿದೆ, ಯಾವುದೇ ಗೊಂದಲ ಇಲ್ಲ ಎಂದರು. ತದನಂತರ ಸಾವಿರಾರು ಕಾರ್ಯ ಕರ್ತರ ಜತೆಗೂಡಿ ಕಾಪು ಬಿಜೆಪಿ ಕಛೇರಿಯಿಂದ ಹೊರಟು ಉಡುಪಿಯಲ್ಲಿ ನಾಮಪತ್ರ ಸಲ್ಲಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…