Featured

ಕಾಪು : ಬಿಜೆಪಿ ಅಭ್ಯರ್ಥಿ ಸುರೇಶ್‌ ಶೆಟ್ಟಿ ಗುರ್ಮೆಯವರಿಗೆ ಸರಿಸಾಟಿ ಬೇರ್ಯಾರಿಲ್ಲ : ಪ್ರಮೋದ್‌ ಮಧ್ವರಾಜ್‌ – Vishwanews24

ಕಾಪು : ಸುರೇಶ್‌ ಶೆಟ್ಟಿ ಗುರ್ಮೆಯವರಿಗೆ ಸರಿಸಾಟಿ ಬೇರ್ಯಾರಿಲ್ಲ : ಪ್ರಮೋದ್‌ ಮಧ್ವರಾಜ್‌

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಅವರದ್ದು ವಿಶಿಷ್ಟ ವ್ಯಕ್ತಿತ್ವ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಮತದಾರರು ಪ್ರಬುದ್ಧರಾಗಿದ್ದಾರೆ. ಜಾತಿವಾದಿಗಳಿಗೆ, ಕೋಮುವಾದಿಗಳಿಗೆ ಮತ ನೀಡದೇ ಸರ್ವಜಾತಿ, ಸರ್ವಧರ್ಮ ಮತ್ತು ಸರ್ವಜನರನ್ನೂ ಒಗ್ಗೂಡಿಸಿಕೊಂಡು ಸಮಾಜದ ಅಭಿವೃದ್ಧಿಗಾಗಿ ಕೆಲಸ ಮಾಡುವ ಸಾಮರ್ಥಯವುಳ್ಳ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಅವರನ್ನು ಬಹುಮತಗಳಿಂದ ಗೆಲ್ಲಿಸಿ ಕೊಡುವ‌ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಕಾಪು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಅವರ ಪರವಾಗಿ ರವಿವಾರ ಪಡುಬಿದ್ರಿ, ಉಚ್ಚಿಲ, ಹೆಜಮಾಡಿ, 80 ಬಡಗುಬೆಟ್ಟು, ಅಲೆವೂರು ಮೊದಲಾದ ಕಡೆಗಳಲ್ಲಿ ಮತಯಾಚನೆ ನಡೆಸಿ, ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಗುರ್ಮೆಯವರಿಗೆ ಸರಿಸಾಟಿ ಬೇರ್ಯಾರಿಲ್ಲ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಅವರದ್ದು ವಿಶಿಷ್ಟ ವ್ಯಕ್ತಿತ್ವ. ಅವರಿಂದ ಯಾವುದೇ ಜಾತಿ, ಧರ್ಮದವರಿಗೆ ಅನ್ಯಾಯವಾಗುವುದಿಲ್ಲ. ಏನಾದರೂ ಆಗುವುದಿದ್ದರೆ ಅದು ಉಪಕಾರ ಮಾತ್ರ. ಅವರು ನಡೆಸಿರುವ ಜನಸೇವೆ, ಧರ್ಮ ಕಾರ್ಯಗಳೇ ಅವರ ಜೀವನ ಶೈಲಿಯನ್ನು ನಮ್ಮ ಮುಂದೆ ತೆರೆದಿಟ್ಟಿದೆ. ಎಲ್ಲ ಸಮುದಾಯದವರೂ ಗುರ್ಮೆ ಅವರ ಬಗ್ಗೆ ಸದಭಿಪ್ರಾಯವನ್ನು ಹೊಂದಿದ್ದು ಅವರು ಬಹುಮತಗಳೊಂದಿಗೆ ಜಯಿಸ‌ುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಮೀನುಗಾರರಿಗೆ ಬಿಜೆಪಿಯೇ ಶ್ರೀರಕ್ಷೆ : ಮೀನುಗಾರರಿಗೆ ಬಿಜೆಪಿಯೇ ಶ್ರಿರಕ್ಷೆಯಾಗಿದೆ. 50 ಸಾವಿರ ಕಿ. ಲೀ. ವರೆಗೆ ಇದ್ದ ಡೀಸೆಲ್‌ ಸಬ್ಸಿಡಿಯನ್ನು ಬೊಮ್ಮಾಯಿ ಸರಕಾರವು ಎರಡು ಲಕ್ಷ ಕಿ. ಲೀ. ವರೆಗೆ ಹೆಚ್ಚಿಸಿದ್ದು ಮೋದಿ ಸರಕಾರವು ನಾಲ್ಕು ದಿನಗಳ ಹಿಂದೆ ನಾಡದೋಣಿ ಮೀನುಗಾರರಿಗೆ 1,488 ಕಿ.ಲೋ.ಲೀ. ಸೀಮೆ ಎಣ್ಣೆಯನ್ನು ಮಂಜೂರು ಮಾಡಿದೆ. ಹೆಜಮಾಡಿ ಬಂದರು ಅಭಿವೃದ್ಧಿಗೆ ಚಾಲನೆ ನೀಡುವ ಮೂಲಕ ಮೀನುಗಾರರ ಹಿತ ಕಾಯಲು ಸರಕಾರ ಮುಂದೆ ಬಂದಿದೆ ಎಂದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್‌ ನಾಯಕ್‌, ಪಕ್ಷದ ನಾಯಕರಾದ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಗೋಪಾಲಕೃಷ್ಣ ರಾವ್‌, ಕಿರಣ್‌ ಆಳ್ವ, ಶರಣ್‌ ಮಟ್ಟು ಸುದ್ಧಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

9 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

10 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

10 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

10 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

11 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

11 hours ago