ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಮತದಾರರು ಪ್ರಬುದ್ಧರಾಗಿದ್ದಾರೆ. ಜಾತಿವಾದಿಗಳಿಗೆ, ಕೋಮುವಾದಿಗಳಿಗೆ ಮತ ನೀಡದೇ ಸರ್ವಜಾತಿ, ಸರ್ವಧರ್ಮ ಮತ್ತು ಸರ್ವಜನರನ್ನೂ ಒಗ್ಗೂಡಿಸಿಕೊಂಡು ಸಮಾಜದ ಅಭಿವೃದ್ಧಿಗಾಗಿ ಕೆಲಸ ಮಾಡುವ ಸಾಮರ್ಥಯವುಳ್ಳ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಬಹುಮತಗಳಿಂದ ಗೆಲ್ಲಿಸಿ ಕೊಡುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಕಾಪು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ಪರವಾಗಿ ರವಿವಾರ ಪಡುಬಿದ್ರಿ, ಉಚ್ಚಿಲ, ಹೆಜಮಾಡಿ, 80 ಬಡಗುಬೆಟ್ಟು, ಅಲೆವೂರು ಮೊದಲಾದ ಕಡೆಗಳಲ್ಲಿ ಮತಯಾಚನೆ ನಡೆಸಿ, ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಗುರ್ಮೆಯವರಿಗೆ ಸರಿಸಾಟಿ ಬೇರ್ಯಾರಿಲ್ಲ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರದ್ದು ವಿಶಿಷ್ಟ ವ್ಯಕ್ತಿತ್ವ. ಅವರಿಂದ ಯಾವುದೇ ಜಾತಿ, ಧರ್ಮದವರಿಗೆ ಅನ್ಯಾಯವಾಗುವುದಿಲ್ಲ. ಏನಾದರೂ ಆಗುವುದಿದ್ದರೆ ಅದು ಉಪಕಾರ ಮಾತ್ರ. ಅವರು ನಡೆಸಿರುವ ಜನಸೇವೆ, ಧರ್ಮ ಕಾರ್ಯಗಳೇ ಅವರ ಜೀವನ ಶೈಲಿಯನ್ನು ನಮ್ಮ ಮುಂದೆ ತೆರೆದಿಟ್ಟಿದೆ. ಎಲ್ಲ ಸಮುದಾಯದವರೂ ಗುರ್ಮೆ ಅವರ ಬಗ್ಗೆ ಸದಭಿಪ್ರಾಯವನ್ನು ಹೊಂದಿದ್ದು ಅವರು ಬಹುಮತಗಳೊಂದಿಗೆ ಜಯಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಮೀನುಗಾರರಿಗೆ ಬಿಜೆಪಿಯೇ ಶ್ರೀರಕ್ಷೆ : ಮೀನುಗಾರರಿಗೆ ಬಿಜೆಪಿಯೇ ಶ್ರಿರಕ್ಷೆಯಾಗಿದೆ. 50 ಸಾವಿರ ಕಿ. ಲೀ. ವರೆಗೆ ಇದ್ದ ಡೀಸೆಲ್ ಸಬ್ಸಿಡಿಯನ್ನು ಬೊಮ್ಮಾಯಿ ಸರಕಾರವು ಎರಡು ಲಕ್ಷ ಕಿ. ಲೀ. ವರೆಗೆ ಹೆಚ್ಚಿಸಿದ್ದು ಮೋದಿ ಸರಕಾರವು ನಾಲ್ಕು ದಿನಗಳ ಹಿಂದೆ ನಾಡದೋಣಿ ಮೀನುಗಾರರಿಗೆ 1,488 ಕಿ.ಲೋ.ಲೀ. ಸೀಮೆ ಎಣ್ಣೆಯನ್ನು ಮಂಜೂರು ಮಾಡಿದೆ. ಹೆಜಮಾಡಿ ಬಂದರು ಅಭಿವೃದ್ಧಿಗೆ ಚಾಲನೆ ನೀಡುವ ಮೂಲಕ ಮೀನುಗಾರರ ಹಿತ ಕಾಯಲು ಸರಕಾರ ಮುಂದೆ ಬಂದಿದೆ ಎಂದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಪಕ್ಷದ ನಾಯಕರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೋಪಾಲಕೃಷ್ಣ ರಾವ್, ಕಿರಣ್ ಆಳ್ವ, ಶರಣ್ ಮಟ್ಟು ಸುದ್ಧಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…