ಕಾಪು ಬಿಜೆಪಿ ಕಚೇರಿಯಲ್ಲಿ ವಾಜಪೇಯಿ ನಿಧನಕ್ಕೆ ಸಂತಾಪ ಸಭೆ
ಕಾಪು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಕಾಪು ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಸಂತಾಪ ಸೂಚನಾ ಸಭೆ ನಡೆಯಿತು.
ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಆಟಲ್ಜಿ ಅಜಾತಶತ್ರುವಾಗಿದ್ದು, ಎಲ್ಲಾ ಪಕ್ಷದವರೊಂದಿಗೂ ನಿಕಟ ಬಾಂಧವ್ಯ ಹೊಂದಿದ್ದರು. ಬಿಜೆಪಿಯೇತರ ಸರ್ಕಾರ ಕೇಂದ್ರದಲ್ಲಿದ್ದಾಗ ಪಕ್ಷ ಬೇಧ ಮರೆತು ಅಭಿವೃದ್ಧಿಗೆ ಶ್ರಮಿಸಿದ್ದರು. ಓರ್ವ ದೇಶ ಕಂಡ ಧೀಮಂತ ನಾಯಕರಾಗಿದ ಅಟ್ಟಲ್ಜಿ ಅವರು, ದೇಶದ ಒಳಿತಿಗಾಗಿ ಹಗಲಿರುಳು ದುಡಿದಿದ್ದರು. ಕಾಪುವಿಗೂ ಅವರಿಗೂ ಅವಿನಾಭಾವ ಸಂಬಂಧವಿತ್ತು ಎಂದ ಅವರು ಇಂತಹ ನಾಯಕನನ್ನು ಕಳೆದು ನಮ್ಮ ಶಕ್ತಿಯನ್ನು ಕೊಂಡಂತೆ ಎಂದು ದುಖಃ ವ್ಯಕ್ತಪಡಿಸಿದರು.
ಕಾಪು ಕ್ಷೇತ್ರ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯ್ತಿ ಸದಸ್ಯೆ ಗೀತಾಂಜಲಿ ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಶಂಕರ ಪೂಜಾರಿ ಕಟಪಾಡಿ ಉಪಸ್ಥಿತರಿದ್ದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…