ಕಾಪು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಸಮಿತಿ ಮತ್ತು ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಅಡುಗೆ ಅನಿಲ ಬೆಲೆಯೇರಿಕೆ ನೀತಿಯನ್ನು ಖಂಡಿಸಿ ಗುರುವಾರ ಸಂಜೆ ಕಾಪು ಪೇಟೆಯಲ್ಲಿ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನದ ವಿರುದ್ಧ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ, ಹೋರಾಟ ನಡೆಸುವ ನಿಟ್ಟಿನಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಮಟ್ಟದಿಂದ ಬೂತ್ ಮಟ್ಟದವರೆಗು ವಿವಿಧ ಹಂತದ ಪ್ರತಿಭಟನೆಗಳು ನಡೆಯಲಿವೆ ಎಂದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪಕ್ಷದ ಮುಖಂಡರಾದ ಸರಸು ಡಿ. ಬಂಗೇರ, ಫರ್ಜಾನಾ ಸಂಜಯ್, ಪ್ರೆಸಿಲ್ಲಾ ಡಿ. ಸೋಜ, ಸುಲೋಚನಾ ಬಂಗೇರ, ಜ್ಯೋತಿ ಹೆಬ್ಬಾರ್, ರೋಶನಿ ಒಲಿವೆರೋ, ಚಂದ್ರಿಕಾ ಶೆಟ್ಟಿ, ಪುಟ್ಟಮ್ಮ ಶ್ರೀಯಾನ್, ಜ್ಯೂಲಿಯಟ್ ವೀರಾ ಡಿ. ಸೋಜ, ಗೋಪಾಲ್ ಪೂಜಾರಿ, ವೈ. ಗಂಗಾಧರ ಸುವರ್ಣ, ಸುನೀಲ್ ಬಂಗೇರ, ದೀಪಕ್ ಕುಮಾರ್ ಎರ್ಮಾಳ್, ದಿನೇಶ್ ಕೋಟ್ಯಾನ್ ಪಲಿಮಾರು, ನವೀನ್ ಎನ್. ಶೆಟ್ಟಿ, ಶ್ರೀಕರ ಅಂಚನ್, ಶಾಬು ಸಾಹೇಬ್, ಮಹಮ್ಮದ ಫಾರೂಕ್ ಚಂದ್ರನಗರ, ವಿವಿಧ ಜನಪ್ರತಿನಿ„ಗಳು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…