Featured

ಕಾಪು – ಬಿಪರ್‌ಜಾಯ್‌ ಚಂಡ ಮಾರುತ : ಮೂಳೂರು ತೊಟ್ಟಂ ಪರಿಸರದಲ್ಲಿ ತೀವ್ರಗೊಂಡ ಕಡಲ್ಕೊರೆತ – Vishwanews24

ಬಿಪರ್‌ಜಾಯ್‌ ಚಂಡ ಮಾರುತ – ಮೂಳೂರು ತೊಟ್ಟಂ ಪರಿಸರದಲ್ಲಿ ತೀವ್ರಗೊಂಡ ಕಡಲ್ಕೊರೆತ

ಕಡಲ್ಕೊರೆತ ತೀವ್ರಗೊಳ್ಳುತ್ತಿದ್ದು ಹೆಚ್ಚಿನ ಹಾನಿಯುಂಟಾಗುತ್ತಿದೆ : ಸ್ಥಳೀಯರ ಆಕ್ರೋಶ

ತುರ್ತಾಗಿ ತಾತ್ಕಾಲಿಕ ತಡೆಗೋಡೆ ನಿರ್ಮಿಸುವುದಾಗಿ ಜಿಲ್ಲಾಧಿಕಾರಿ ಭರವಸೆ : ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ

ಕಾಪು: ಬಿಪರ್‌ಜಾಯ್‌ ಚಂಡ ಮಾರುತದ ಪರಿಣಾಮ ಕಾಪು ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ಪರಿಸರದಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಅಲೆಗಳ ರಭಸಕ್ಕೆ ಕಲ್ಲು ಬಂಡೆಗಳ ತಡೆಗೋಡೆ ಸಮುದ್ರ ಪಾಲಾಗುತ್ತಿದೆ. ತೆಂಗಿನ ಮರಗಳು, ಭೂಭಾಗ ನೀರುಪಾಲಾಗಿ ಸ್ಥಳೀಯರು ಆತಂಕ ಪಡುವಂತಾಗಿದೆ.

ಲತಾ ಎಸ್‌. ಪೂಜಾರಿ, ರತ್ನಾ ಪೂಜಾರಿ, ಲೀಲಾ ಪೂಜಾರಿ, ಮಹಾಲಿಂಗ ಪೂಜಾರಿ, ದಿನೇಶ್‌ ಪೂಜಾರಿ, ನಳಿನಾಕ್ಷಿ ಪೂಜಾರಿ ಅವರ ಮನೆ ಸಮೀಪ ಕೊರೆತ ತೀವ್ರಗೊಂಡಿದ್ದು 2 ತೆಂಗಿನ ಮರಗಳು ಮತ್ತು ಹಿಂದೆ ಹಾಕಿದ್ದ ತಡೆಗೋಡೆಯ ಬೃಹತ್‌ ಬಂಡೆಗಳು ಸಮುದ್ರಕ್ಕೆ ಆಹುತಿಯಾಗಿವೆ. ಇನ್ನಷ್ಟು ತೆಂಗಿನ ಮರಗಳು ಸಮುದ್ರ ಪಾಲಾಗುವ ಭೀತಿ ಇದೆ. ಕಾಪು ಕಂದಾಯ ಅಧಿಕಾರಿ ಲೋಕನಾಥ್‌ ಲಮಾಣಿ ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲಿಸಿದ್ದು ಜಿಲ್ಲಾಡಳಿತ, ತಾಲೂಕು ಆಡಳಿತಕ್ಕೆ ನಷ್ಟದ ಬಗ್ಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.

ಸ್ಥಳೀಯರ ಆಕ್ರೋಶ: ಇಲ್ಲಿ ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ತೀವ್ರಗೊಳ್ಳುತ್ತಿದ್ದು ಹೆಚ್ಚಿನ ಹಾನಿಯುಂಟಾಗುತ್ತಿದೆ. ಕಳೆದ ವರ್ಷ ಸಂಸದರು, ಕೇಂದ್ರ-ರಾಜ್ಯ ಸಚಿವರು, ಶಾಸಕರು, ವಿಪಕ್ಷ ನಾಯಕರು, ಮಾಜಿ ಸಿಎಂ ಸಹಿತ ಹಲವರು ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಅದರಂತೆ ಕಾಮಗಾರಿ ಆರಂಭಿಸಿದ್ದು ಕೆಲವೆಡೆ ಕಾಮಗಾರಿಗಾಗಿ ಹಾಕಿರುವ ಕಲ್ಲುಗಳೇ ಸಮುದ್ರ ಪಾಲಾಗಿವೆ. ಒಂದೆಡೆ ಕಾಮಗಾರಿ ನಡೆಯುತ್ತಿದ್ದರೆ ಮತ್ತೂಂದೆಡೆ ಕಲ್ಲುಗಳು ಸಮುದ್ರ ಪಾಲಾಗುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುರ್ತು ಕಾಮಗಾರಿ
ಕಡಲ್ಕೊರೆತ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿರುವ ದಿಶಾ ಸಭೆಯಲ್ಲಿ ಜಿಲ್ಲಾಡಳಿತ ಮತ್ತು ಕೇಂದ್ರ ಸಚಿವರೊಂದಿಗೆ ಚರ್ಚಿಸ‌ಲಾಗಿದೆ. ಅಗತ್ಯವಿರುವಲ್ಲಿ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಅನುದಾನ ಬಳಸಿಕೊಂಡು ತುರ್ತಾಗಿ ತಾತ್ಕಾಲಿಕ ತಡೆಗೋಡೆ ನಿರ್ಮಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ ಎಂದು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ತಿಳಿಸಿದ್ದಾರೆ.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

1 hour ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

3 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 day ago