ಲತಾ ಎಸ್. ಪೂಜಾರಿ, ರತ್ನಾ ಪೂಜಾರಿ, ಲೀಲಾ ಪೂಜಾರಿ, ಮಹಾಲಿಂಗ ಪೂಜಾರಿ, ದಿನೇಶ್ ಪೂಜಾರಿ, ನಳಿನಾಕ್ಷಿ ಪೂಜಾರಿ ಅವರ ಮನೆ ಸಮೀಪ ಕೊರೆತ ತೀವ್ರಗೊಂಡಿದ್ದು 2 ತೆಂಗಿನ ಮರಗಳು ಮತ್ತು ಹಿಂದೆ ಹಾಕಿದ್ದ ತಡೆಗೋಡೆಯ ಬೃಹತ್ ಬಂಡೆಗಳು ಸಮುದ್ರಕ್ಕೆ ಆಹುತಿಯಾಗಿವೆ. ಇನ್ನಷ್ಟು ತೆಂಗಿನ ಮರಗಳು ಸಮುದ್ರ ಪಾಲಾಗುವ ಭೀತಿ ಇದೆ. ಕಾಪು ಕಂದಾಯ ಅಧಿಕಾರಿ ಲೋಕನಾಥ್ ಲಮಾಣಿ ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲಿಸಿದ್ದು ಜಿಲ್ಲಾಡಳಿತ, ತಾಲೂಕು ಆಡಳಿತಕ್ಕೆ ನಷ್ಟದ ಬಗ್ಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.
ಸ್ಥಳೀಯರ ಆಕ್ರೋಶ: ಇಲ್ಲಿ ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ತೀವ್ರಗೊಳ್ಳುತ್ತಿದ್ದು ಹೆಚ್ಚಿನ ಹಾನಿಯುಂಟಾಗುತ್ತಿದೆ. ಕಳೆದ ವರ್ಷ ಸಂಸದರು, ಕೇಂದ್ರ-ರಾಜ್ಯ ಸಚಿವರು, ಶಾಸಕರು, ವಿಪಕ್ಷ ನಾಯಕರು, ಮಾಜಿ ಸಿಎಂ ಸಹಿತ ಹಲವರು ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಅದರಂತೆ ಕಾಮಗಾರಿ ಆರಂಭಿಸಿದ್ದು ಕೆಲವೆಡೆ ಕಾಮಗಾರಿಗಾಗಿ ಹಾಕಿರುವ ಕಲ್ಲುಗಳೇ ಸಮುದ್ರ ಪಾಲಾಗಿವೆ. ಒಂದೆಡೆ ಕಾಮಗಾರಿ ನಡೆಯುತ್ತಿದ್ದರೆ ಮತ್ತೂಂದೆಡೆ ಕಲ್ಲುಗಳು ಸಮುದ್ರ ಪಾಲಾಗುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುರ್ತು ಕಾಮಗಾರಿ
ಕಡಲ್ಕೊರೆತ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿರುವ ದಿಶಾ ಸಭೆಯಲ್ಲಿ ಜಿಲ್ಲಾಡಳಿತ ಮತ್ತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಅಗತ್ಯವಿರುವಲ್ಲಿ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಅನುದಾನ ಬಳಸಿಕೊಂಡು ತುರ್ತಾಗಿ ತಾತ್ಕಾಲಿಕ ತಡೆಗೋಡೆ ನಿರ್ಮಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…