ಲತಾ ಎಸ್. ಪೂಜಾರಿ, ರತ್ನಾ ಪೂಜಾರಿ, ಲೀಲಾ ಪೂಜಾರಿ, ಮಹಾಲಿಂಗ ಪೂಜಾರಿ, ದಿನೇಶ್ ಪೂಜಾರಿ, ನಳಿನಾಕ್ಷಿ ಪೂಜಾರಿ ಅವರ ಮನೆ ಸಮೀಪ ಕೊರೆತ ತೀವ್ರಗೊಂಡಿದ್ದು 2 ತೆಂಗಿನ ಮರಗಳು ಮತ್ತು ಹಿಂದೆ ಹಾಕಿದ್ದ ತಡೆಗೋಡೆಯ ಬೃಹತ್ ಬಂಡೆಗಳು ಸಮುದ್ರಕ್ಕೆ ಆಹುತಿಯಾಗಿವೆ. ಇನ್ನಷ್ಟು ತೆಂಗಿನ ಮರಗಳು ಸಮುದ್ರ ಪಾಲಾಗುವ ಭೀತಿ ಇದೆ. ಕಾಪು ಕಂದಾಯ ಅಧಿಕಾರಿ ಲೋಕನಾಥ್ ಲಮಾಣಿ ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲಿಸಿದ್ದು ಜಿಲ್ಲಾಡಳಿತ, ತಾಲೂಕು ಆಡಳಿತಕ್ಕೆ ನಷ್ಟದ ಬಗ್ಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.
ಸ್ಥಳೀಯರ ಆಕ್ರೋಶ: ಇಲ್ಲಿ ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ತೀವ್ರಗೊಳ್ಳುತ್ತಿದ್ದು ಹೆಚ್ಚಿನ ಹಾನಿಯುಂಟಾಗುತ್ತಿದೆ. ಕಳೆದ ವರ್ಷ ಸಂಸದರು, ಕೇಂದ್ರ-ರಾಜ್ಯ ಸಚಿವರು, ಶಾಸಕರು, ವಿಪಕ್ಷ ನಾಯಕರು, ಮಾಜಿ ಸಿಎಂ ಸಹಿತ ಹಲವರು ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಅದರಂತೆ ಕಾಮಗಾರಿ ಆರಂಭಿಸಿದ್ದು ಕೆಲವೆಡೆ ಕಾಮಗಾರಿಗಾಗಿ ಹಾಕಿರುವ ಕಲ್ಲುಗಳೇ ಸಮುದ್ರ ಪಾಲಾಗಿವೆ. ಒಂದೆಡೆ ಕಾಮಗಾರಿ ನಡೆಯುತ್ತಿದ್ದರೆ ಮತ್ತೂಂದೆಡೆ ಕಲ್ಲುಗಳು ಸಮುದ್ರ ಪಾಲಾಗುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುರ್ತು ಕಾಮಗಾರಿ
ಕಡಲ್ಕೊರೆತ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿರುವ ದಿಶಾ ಸಭೆಯಲ್ಲಿ ಜಿಲ್ಲಾಡಳಿತ ಮತ್ತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಅಗತ್ಯವಿರುವಲ್ಲಿ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಅನುದಾನ ಬಳಸಿಕೊಂಡು ತುರ್ತಾಗಿ ತಾತ್ಕಾಲಿಕ ತಡೆಗೋಡೆ ನಿರ್ಮಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…