ಕಾಪು: ಕಾಪು ಬೀಚ್ನಲ್ಲಿ ಸಮುದ್ರ ಸ್ನಾನಕ್ಕಿಳಿದು ನೀರು ಪಾಲಾಗುವ ಅಪಾಯಕ್ಕೆ ಸಿಲುಕಿದ್ದ ವಿದ್ಯಾರ್ಥಿಯೊಬ್ಬನನ್ನು ಲೈಫ್ ಗಾರ್ಡ್ಗಳ ತಂಡ ರಕ್ಷಿಸಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕೊಪ್ಪಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ಬೈಕ್ನಲ್ಲಿ ಕಾಪು ಬೀಚ್ಗೆ ಆಗಮಿಸಿದ್ದು, ಇವರೆಲ್ಲರೂ ಸಮುದ್ರ ಸ್ನಾನಕ್ಕಿಳಿದ್ದರು. ಈ ಪೈಕಿ ರಾಹುಲ್ (20) ಎಂಬಾತ ನೀರಿನಲ್ಲಿ ಮುಳುಗಿದ್ದು, ಇದನ್ನು ಗಮನಿಸಿದ ಜೀವ ರಕ್ಷಕರ ತಂಡ ಕೂಡಲೇ ಸಮುದ್ರಕ್ಕೆ ಇಳಿದು ರಕ್ಷಿಸಿದೆ.
ಬಳಿಕ ಪ್ರಥಮ ಚಿಕಿತ್ಸೆ ನೀಡಿ, ಕಾಪು ಟ್ರೂ ಕೇರ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಲಾಗಿದೆ ಎಂದು ತಿಳಿದು ಬಂದಿದೆ.
ಲೈಫ್ ಗಾರ್ಡ್ಗಳಾದ ಸಂದೇಶ್, ಪ್ರವೀಣ್, ದಾದಾ ಪೀರ್ ಮತ್ತು ಸ್ಥಳೀಯರಾದ ಪ್ರಶಾಂತ್ ನೇತೃತ್ವದಲ್ಲಿ ರಕ್ಷಣ ಕಾರ್ಯ ನಡೆಸಲಾಗಿದ್ದು, ಪ್ರಶಂಸೆ ವ್ಯಕ್ತವಾಗಿದೆ.
ಉಡುಪಿ : ಮಲಬಾರ್ ಗೋಲ್ಡ್ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ…
ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…
ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ…
ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…
ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್ವೊಂದು…