ಕಾಪು: ತಾಲೂಕಿನ ಬೆಳಪು, ಪುಂಚಲಕಾಡು ಪರಿಸರದಲ್ಲಿ ನಿತ್ಯ ಸಂಚಾರಕ್ಕೆ ನರ್ಮ್ ಬಸ್ ಗಳ ವ್ಯವಸ್ಥೆ ಮಾಡಿಕೊಡುವಂತೆ ಈ ಪರಿಸರದ ಜನರು ರಾಜ್ಯ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಭಾಗದಲ್ಲಿ ಈಗಾಗಲೇ ಖಾಸಗಿ ಬಸ್ ಗಳ ಓಡಾಟವಿದ್ದು ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ಹಾಗೂ ಪ್ರತಿ ದಿನ ಕೂಲಿ ಕೆಲಸಕ್ಕೆ ಹಾಗೂ ಇತರೆ ಕೆಲಸಕ್ಕೆ ಹೋಗುವ ಸ್ಥಳೀಯರು ಮತ್ತು ಸಾರ್ವಜನಿಕರು ಸೇರಿ ಸಾವಿರಕ್ಕೂ ಹೆಚ್ಚು ಜನರು ಬಸ್ಸನ್ನೇ ಅಬಲಂಭಿಸಿದ್ದಾರೆ. ಆದರೆ ಅನೇಕ ಸಂದರ್ಭದಲ್ಲಿ ಖಾಸಗಿ ಬಸ್ ಗಳ ಮುಸ್ಕರ, ಬಂದ್ ಇತ್ಯಾದಿಗಳಿಂದಾಗಿ ಈ ಭಾಗದ ಸ್ಥಳೀಯರ ನಿತ್ಯ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಈ ಭಾಗದಲ್ಲಿ ಸಾರ್ವಜನಿಕರ ನೆರವಿಗೆ ನರ್ಮ್ ಬಸ್ ವ್ಯವಸ್ಥೆ ಮಾಡಿಕೊಡಬೇಕು ಎಂದು ಸ್ಥಳೀಯ ನಿವಾಸಿಗಳು ಬೇಡಿಕೆ ಇಟ್ಟಿದ್ದಾರೆ.
ಈ ಹಿಂದೆ ಎರಡು ನರ್ಮ್ ಬಸ್ಸುಗಳು ಇದೇ ಮಾರ್ಗದ ಮೂಲಕ ಆನೆಗುಂದಿ ಮಠದವರೆಗೆ ಸಂಚಾರ ನಡೆಸುತ್ತಿದ್ದವು, ಆದರೆ ಈ ಭಾಗದ ಖಾಸಗಿ ಬಸ್ ಮಾಲಕರ ಒತ್ತಡಕ್ಕೆ ಮಣಿದು ಸರಕಾರಿ ಬಸ್ಸನ್ನು ಸ್ಥಗಿತಗೊಳಿಸಿದ್ದಾರೆ. ಸದ್ಯ ಈ ಭಾಗಕ್ಕೆ ನರ್ಮ್ ಬಸ್ ಸೇವೆಯ ಅಗತ್ಯ ವಿದ್ದು ಸರಕಾರಿ ನರ್ಮ್ ಬಸ್ಸಿನ ಸೇವೆಯನ್ನು ಪುನರ್ ಕಲ್ಪಿಸಿಕೊಡುವಂತೆ ಮನವಿ ಸಲ್ಲಿಸಲಾಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…