ಕಾಪು: ಉಡುಪಿ ಜಿಲ್ಲೆ ಕಾಪು ವಿಧಾನಸಭಾ ಕ್ಷೇತ್ರದ ಬೆಳ್ವೆ ಗ್ರಾಮದಲ್ಲಿನ ಕುಂತಲನಗರದ ಭದ್ರಮಾ ( ವಯಾ ಮಾಧವ ನಗರ-ಬಂಟಕಲ್ಲು) ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಇಂದು ಸಂಸದೆ ಶೋಭಾ ಕರಂದ್ಲಾಜೆ, ಸ್ಥಳೀಯ ಶಾಸಕರಾದ ಲಾಲಾಜಿ ಆರ್. ಮೆಂಡನ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 6 ಕೋಟಿ 45 ಲಕ್ಷ ರೂ. ವೆಚ್ಚದಲ್ಲಿ ಈ ಸೇತುವೆ ಮತ್ತು ಅಪ್ರೋಚ್ ರೋಡುಗಳು ನಿರ್ಮಾಣಗೊಳ್ಳಲಿವೆ.
ಇದಲ್ಲದೆ, ಪ್ರದೇಶದಲ್ಲಿ ಹಾದು ಹೋಗುವ ರಸ್ತೆಯ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ 4.5 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಸೇತುವೆಯ ಕಾಮಗಾರಿ ಸಂಪೂರ್ಣಗೊಂಡ ತಕ್ಷಣವೇ ರಸ್ತೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಿ ಅನುದಾನ ಬಿಡುಗಡೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ, ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ವಿಶೇಷ ಧನ್ಯವಾದ ಅರ್ಪಿಸಿದರು.
ಈ ಸಂದರ್ಭ ಜಿಪಂ ಅಧ್ಯಕ್ಷ ದಿನಕರ್ ಬಾಬು, ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…