ಕಾಪು: ಇಲ್ಲಿನ ಹೊಸ ಮಾರಿಗುಡಿಯು ದಕ್ಷಿಣ ಭಾರತದಲ್ಲೇ ಅತ್ಯಪೂರ್ವವೆಂಬಂತೆ ಅದ್ಭುತವಾಗಿ ನಿರ್ಮಾಣಗೊಂಡಿದೆ. ಭಕ್ತರ ಶಿಲಾಸೇವೆ ಸಹಿತ ವಿವಿಧ ಸೇವಾ ಕಾರ್ಯಗಳ ಮೂಲಕವಾಗಿ ಹೊಸತನಗಳೊಂದಿಗೆ ನಿರ್ಮಾಣ ಗೊಂಡಿರುವ ಮಾರಿಗುಡಿಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲೂ ವೈಶಿಷ್ಟ್ಯಗಳಿದ್ದು, ಇದರಿಂದ ನಾಡಿಗೆ ಮಂಗಳ ಉಂಟಾಗಲಿದೆ ಎಂದು ಶ್ರೀ ಎಡನೀರು ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಹಮ್ಮಿಕೊಂಡಿ ರುವ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.
ಮಾರಿಗುಡಿಯಿಂದ ಸಮಾಜ ಜಾಗೃತಿ ಕಾರ್ಯ: ಕೇಮಾರು ಶ್ರೀ ಶ್ರೀ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಮಾತನಾಡಿ, ಸಮಸ್ತ ಹಿಂದೂ ಸಮಾಜವನ್ನು ಜಾಗೃತಗೊಳಿಸುವಲ್ಲಿ ಕಾಪು ಮಾರಿಗುಡಿಯು ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಹೊಸ ಮಾರಿ ಗುಡಿಯ ಜೀರ್ಣೋದ್ಧಾರ, ಬ್ರಹ್ಮಕಲ ಶೋತ್ಸವ ಧಾರ್ಮಿಕ ಕಾರ್ಯ ಕ್ರಮಗಳಲ್ಲಿಯೂ ಸಮಷ್ಟಿಯ ಹಿತ ಕಾಯ್ದುಕೊಂಡು ಬರುವ ಮೂಲಕ ಶ್ರೇಷ್ಠತೆಯನ್ನು ಮೆರೆಯಲಾಗಿದೆ ಎಂದು ಹೇಳಿದರು.
ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ನಮ್ಮನ್ನು ಹೆತ್ತು ಹೊತ್ತು ಸಲಹುವ ಅಮ್ಮನೇ ನಮೆಲ್ಲರನ್ನೂ ಸಂಸ್ಕಾರವಂತರನ್ನಾಗಿ ಬೆಳೆಸುತ್ತಾಳೆ. ಇದಕ್ಕೆ ಪೂರಕವಾಗಿ ಕಾಪು ಮಾರಿಯಮ್ಮನ ದೇವಸ್ಥಾನವು ಧರ್ಮ ಕಾರ್ಯಗಳನ್ನು ಉಳಿಸಿ, ಬೆಳೆಸುವ ಸಂಸ್ಕಾರ ಕೇಂದ್ರವಾಗಿ ಮೂಡಿ ಬರಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಎಲ್ಲರ ನಿರೀಕ್ಷೆಗೂ ಮೀರಿ ಮಾರಿಗುಡಿ ನಿರ್ಮಾಣಗೊಂಡಿದೆ. ಇದರ ಹಿಂದೆ ದುಡಿದ ಪ್ರತಿಯೊಬ್ಬರ ಶ್ರಮವೂ ಇಲ್ಲಿ ಉಲ್ಲೇಖನೀಯ ಮತ್ತು ಶ್ಲಾಘನೀಯವಾಗಿದೆ ಎಂದರು.
ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ| ಎಚ್. ಎಸ್. ಬಲ್ಲಾಳ್, ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಎಸ್. ಶೆಟ್ಟಿ ಕಾಪು, ಕೊಡವೂರು ಶಿರಡಿ ಸಾಯಿಬಾಬಾ ಮಂದಿರದ ಆಡಳಿತ ಮೊಕ್ತೇಸರ ದಿವಾಕರ ಶೆಟ್ಟಿ ಕೊಡವೂರು, ಶಂಭು ಶೆಟ್ಟಿ ಉಡುಪಿ, ಮಸ್ಕತ್ ನ ಉದ್ಯಮಿ ದಿವಾಕರ್ ಶೆಟ್ಟಿ ಮಲ್ಲಾರು, ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅತಿಥಿಗಳಾಗಿದ್ದರು.
ದಾನಿ ಪುರುಷೋತ್ತಮ ಶೆಟ್ಟಿ ದಂಪತಿಯನ್ನು ಸಮ್ಮಾನಿಸಲಾಯಿತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿದರು. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿ, ಅಶೋಕ್ ಪಕಳ ವಂದಿಸಿದರು.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…