Featured

ಕಾಪು ಬ್ರಹ್ಮಕಲಶೋತ್ಸವ :ಇದರಿಂದ ನಾಡಿಗೆ ಮಂಗಳ ಉಂಟಾಗಲಿದೆ : ಎಡನೀರು ಶ್ರೀ – vishwanews24

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಾಲ್ಕನೇ ದಿನ..

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಡನೀರು ಸ್ವಾಮೀಜಿ ಆಶೀರ್ವಚನ

ಸಮಸ್ತ ಹಿಂದೂ ಸಮಾಜವನ್ನು ಜಾಗೃತಗೊಳಿಸುವಲ್ಲಿ ಕಾಪು ಮಾರಿಗುಡಿಯು ಮಹತ್ವದ ಪಾತ್ರ ನಿರ್ವಹಿಸುತ್ತಿದೆ : ಕೇಮಾರು ಶ್ರೀ

ಕಾಪು: ಇಲ್ಲಿನ ಹೊಸ ಮಾರಿಗುಡಿಯು ದಕ್ಷಿಣ ಭಾರತದಲ್ಲೇ ಅತ್ಯಪೂರ್ವವೆಂಬಂತೆ ಅದ್ಭುತವಾಗಿ ನಿರ್ಮಾಣಗೊಂಡಿದೆ. ಭಕ್ತರ ಶಿಲಾಸೇವೆ ಸಹಿತ ವಿವಿಧ ಸೇವಾ ಕಾರ್ಯಗಳ ಮೂಲಕವಾಗಿ ಹೊಸತನಗಳೊಂದಿಗೆ ನಿರ್ಮಾಣ ಗೊಂಡಿರುವ ಮಾರಿಗುಡಿಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲೂ ವೈಶಿಷ್ಟ್ಯಗಳಿದ್ದು, ಇದರಿಂದ ನಾಡಿಗೆ ಮಂಗಳ ಉಂಟಾಗಲಿದೆ ಎಂದು ಶ್ರೀ ಎಡನೀರು ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಹಮ್ಮಿಕೊಂಡಿ ರುವ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಮಾರಿಗುಡಿಯಿಂದ ಸಮಾಜ ಜಾಗೃತಿ ಕಾರ್ಯ: ಕೇಮಾರು ಶ್ರೀ ಶ್ರೀ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಮಾತನಾಡಿ, ಸಮಸ್ತ ಹಿಂದೂ ಸಮಾಜವನ್ನು ಜಾಗೃತಗೊಳಿಸುವಲ್ಲಿ ಕಾಪು ಮಾರಿಗುಡಿಯು ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಹೊಸ ಮಾರಿ ಗುಡಿಯ ಜೀರ್ಣೋದ್ಧಾರ, ಬ್ರಹ್ಮಕಲ ಶೋತ್ಸವ ಧಾರ್ಮಿಕ ಕಾರ್ಯ ಕ್ರಮಗಳಲ್ಲಿಯೂ ಸಮಷ್ಟಿಯ ಹಿತ ಕಾಯ್ದುಕೊಂಡು ಬರುವ ಮೂಲಕ ಶ್ರೇಷ್ಠತೆಯನ್ನು ಮೆರೆಯಲಾಗಿದೆ ಎಂದು ಹೇಳಿದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್‌ ಮಾತನಾಡಿ, ನಮ್ಮನ್ನು ಹೆತ್ತು ಹೊತ್ತು ಸಲಹುವ ಅಮ್ಮನೇ ನಮೆಲ್ಲರನ್ನೂ ಸಂಸ್ಕಾರವಂತರನ್ನಾಗಿ ಬೆಳೆಸುತ್ತಾಳೆ. ಇದಕ್ಕೆ ಪೂರಕವಾಗಿ ಕಾಪು ಮಾರಿಯಮ್ಮನ ದೇವಸ್ಥಾನವು ಧರ್ಮ ಕಾರ್ಯಗಳನ್ನು ಉಳಿಸಿ, ಬೆಳೆಸುವ ಸಂಸ್ಕಾರ ಕೇಂದ್ರವಾಗಿ ಮೂಡಿ ಬರಲಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಎಲ್ಲರ ನಿರೀಕ್ಷೆಗೂ ಮೀರಿ ಮಾರಿಗುಡಿ ನಿರ್ಮಾಣಗೊಂಡಿದೆ. ಇದರ ಹಿಂದೆ ದುಡಿದ ಪ್ರತಿಯೊಬ್ಬರ ಶ್ರಮವೂ ಇಲ್ಲಿ ಉಲ್ಲೇಖನೀಯ ಮತ್ತು ಶ್ಲಾಘನೀಯವಾಗಿದೆ ಎಂದರು.

ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ| ಎಚ್‌. ಎಸ್‌. ಬಲ್ಲಾಳ್‌, ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಎಸ್‌. ಶೆಟ್ಟಿ ಕಾಪು, ಕೊಡವೂರು ಶಿರಡಿ ಸಾಯಿಬಾಬಾ ಮಂದಿರದ ಆಡಳಿತ ಮೊಕ್ತೇಸರ ದಿವಾಕರ ಶೆಟ್ಟಿ ಕೊಡವೂರು, ಶಂಭು ಶೆಟ್ಟಿ ಉಡುಪಿ, ಮಸ್ಕತ್‌ ನ ಉದ್ಯಮಿ ದಿವಾಕರ್‌ ಶೆಟ್ಟಿ ಮಲ್ಲಾರು, ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅತಿಥಿಗಳಾಗಿದ್ದರು.

ದಾನಿ ಪುರುಷೋತ್ತಮ ಶೆಟ್ಟಿ ದಂಪತಿಯನ್ನು ಸಮ್ಮಾನಿಸಲಾಯಿತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಹಾಸ್‌ ಹೆಗ್ಡೆ ನಂದಳಿಕೆ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್‌ ವಿ. ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿದರು. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿ, ಅಶೋಕ್‌ ಪಕಳ ವಂದಿಸಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

12 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

12 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

12 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

13 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

13 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

15 hours ago