ಕಾಪು: ಕಾಂಗ್ರೆಸ್ ಪಕ್ಷದ ನೂತನ ಸಾರಥಿಯಾಗಿ ಅಧಿಕಾರ ವಹಿಸಿಕೊಂಡ ಡಿ ಕೆ ಶಿವಕುಮಾರ್ರವರ ಅಧಿಕಾರ ಪ್ರತಿಜ್ಞಾ ವಿಧಿ ಕಾರ್ಯಕ್ರಮ ವನ್ನು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಗುರುವಾರ ಕಾಪು ರಾಜೀವ ಭವನದಲ್ಲಿ ಆಚರಿಸಲಾಯಿತು.
ಈ ಸಂದರ್ಭ ಕಾಪು ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಸುವರ್ಣ ಮಾತನಾಡಿ, ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಯುವ ನಾಯಕ ಚುಕ್ಕಾಣಿ ಹಿಡಿದಿದ್ದು ಅವರ ನೇತ್ರತ್ವದಲ್ಲಿ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಉತುಂಗಕ್ಕೆ ಏರಲಿದೆ. ಬಿಜೆಪಿಯವರ ಸುಳ್ಳು ಪ್ರಚಾರದಿಂದ ಕಾಂಗ್ರೆಸ್ ಸ್ವಲ್ಪ ಮಟ್ಟಿಗೆ ಹಿನ್ನಡೆ ಕಂಡಿದ್ದು, ಮುಂದಿನ ದಿನಗಳಲ್ಲಿ ತನ್ನ ಹಿಂದಿನ ಶಕ್ತಿಶಾಲಿ ನಡೆಯನ್ನು ನಡೆಸಲಿದೆ. ಕಾಂಗ್ರೆಸ್ ಪಕ್ಷವು ತನ್ನ ಗತವೈಭವವನ್ನು ಕಾಣಲಿದೆ. ಕಪು ಕಾಂಗ್ರೆಸ್ ಮಾಜಿ ಸಚಿವ ವಿನಯಕುಮಾರ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ತನ್ನ ಅಧಿಪತ್ಯವನ್ನು ಮುಂದಿನ ಚುನಾವಣೆಯಲ್ಲಿ ನಡೆಸಲಿದೆ. ಯುವ ಕಾಂಗ್ರೆಸ್ಸಿಗರು ಸಂಕಲ್ಪ ಮಾಡಿ ಕಾಂಗ್ರೆಸ್ ಪಕ್ಷವನ್ನು ಒಗ್ಗೂಡಿಸುವ ಪ್ರಯತ್ನ ಮಾಡಬೇಕಿದೆ ಎಂದರು.
ಕೋವಿಡ್19 ಮಾರಕ ಕಾಯಿಲೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದ್ದು, ಆ ಪ್ರಯುಕ್ತ ಕಾಪು ವಿಧಾನಸಭಾ ಕ್ಷೇತ್ರದ 29 ಕಡೆಗಳಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಕಾಪು ಕಾಂಗ್ರೆಸ್ನ ನಿಯೊಜಿತ ಅಧ್ಯಕ್ಷ ಅಖಿಲೇಶ್ ಕೋಟ್ಯಾನ್, ಪುರಸಭಾ ಉಪಾಧ್ಯಕ್ಷ ಉಸ್ಮಾನ್ ಕಾಪು, ಕಾರ್ತಿಕ್, ಹರೀಶ್ ನಾಯಕ್, ಅಮೀರ್ ಕಾಪು, ಅಶ್ವಿನಿ ಪೂಜಾರಿ, ದೇವರಾಜ್, ಮಾಧವ ಪಾಲನ್ ನಾಗೇಶ್ ಮತ್ತಿತರರು ಉಪಸ್ತಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…