ಕಾಪು : ಬಲೆಗೆ ಬಿದ್ದ ಟನ್ಗಟ್ಟಲೆ ಮೀನುಗಳನ್ನು ದಡಕ್ಕೆ ಎಳೆಯಲು ಮೀನುಗಾರರು ಬಹಳಷ್ಟು ಶ್ರಮಪಡುತ್ತಿದ್ದರು. ಭಾರೀ ಪ್ರಮಾಣದ ಮೀನಿನಿಂದಾಗಿ ಕೈರಂಪಣಿಯ ಬಲೆ ಹರಿದು, ಮೀನು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ತೀರದಲ್ಲಿ ಮೀನುಗಳು ಮೇಲಕ್ಕೆ ಚಿಮ್ಮುತ್ತಿ ರುವ ದೃಶ್ಯಗಳು ಕಂಡುಬರುತ್ತಿದ್ದವು. ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಸಿಲುಕಿದ್ದು, ಮೀನುಗಾರರಿಗೆ ಬಂಪರ್ ಡ್ರಾ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಕಡಲಿನಲ್ಲಿ ಬಿರುಗಾಳಿ ಏಳುತ್ತೆ, ಅಲೆಗಳು ಮೇಲೆ ಕೆಳಗೆ ಆಗಿ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ಬರುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಎಂಬ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.
ಕಳೆದ ಎರಡು ದಿನಗಳಿಂದ ಮಟ್ಟು ಕಡಲತೀರದಲ್ಲಿ ರಾಶಿರಾಶಿಯಾಗಿ ಮೀನುಗಳು ಕಂಡುಬರುತ್ತಿದ್ದು. ಕೈರಂಪಣಿ ಬಲೆಗೆ ಸಿಕ್ಕಿಬಿದ್ದ ಭಾರೀ ಪ್ರಮಾಣದ ಮೀನುಗಳನ್ನು ತೀರಕ್ಕೆ ಎಳೆದು ತರಲು ಮೀನುಗಾರರು ಹರ ಸಾಹಸಪಟ್ಟರು.
ಬಲೆಗೆ ಬಿದ್ದ ಟನ್ಗಟ್ಟಲೆ ಮೀನುಗಳನ್ನು ದಡಕ್ಕೆ ಎಳೆಯಲು ಸಂದರ್ಭ ಕೈರಂಪಣಿಯ ಬಲೆ ಹರಿದು, ಮೀನು ಚೆಲ್ಲಾಪಿಲ್ಲಿಯಾಯಿತ್ತೆನ್ನಲಾಗಿದೆ. ಹೀಗೆ ಬಲೆಯಿಂದ ಹೊರಗೆ ಬಂದು ಒದ್ದಾಡುತ್ತಿದ್ದ ಮೀನುಗಳು ಸಾರ್ವಜನಿಕರ ಪಾಲಾದವು. ಹೀಗೆ ತೀರದಲ್ಲಿ ಮೀನಿಾಗಿ ಜನಸ್ತೋಮವೇ ನೆರೆದಿತ್ತು.
ಬಂಗುಡೆ, ಬೊಳಿಂಜಿರ್, ಕಲ್ಲೂರು, ಬೂತಾಯಿ, ಕೊಂತಿ, ಎಟ್ಟಿಯಂತಹ ಮೀನುಗಳು ಭಾರೀ ಪ್ರಮಾಣದಲ್ಲಿ ಬಲೆಗೆ ಬಿದ್ದಿವೆ. ಒಟ್ಟಾರೆಯಾಗಿ ಇಲ್ಲಿ ಮೀನುಗಾರರ ಬಲೆಗೆ ಸುಮಾರು ಐದು ಟನ್ಗಳಷ್ಟು ಮೀನು ಸಿಕ್ಕಿದೆ. ಹೀಗಾಗಿ ಈ ಪರಿಸರದ ಮತ್ಸ್ಯಪ್ರಿಯರಂತೂ ಫುಲ್ ಖುಷಿಯಾಗಿದ್ದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…