ಕಾಪು : ಬಲೆಗೆ ಬಿದ್ದ ಟನ್ಗಟ್ಟಲೆ ಮೀನುಗಳನ್ನು ದಡಕ್ಕೆ ಎಳೆಯಲು ಮೀನುಗಾರರು ಬಹಳಷ್ಟು ಶ್ರಮಪಡುತ್ತಿದ್ದರು. ಭಾರೀ ಪ್ರಮಾಣದ ಮೀನಿನಿಂದಾಗಿ ಕೈರಂಪಣಿಯ ಬಲೆ ಹರಿದು, ಮೀನು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ತೀರದಲ್ಲಿ ಮೀನುಗಳು ಮೇಲಕ್ಕೆ ಚಿಮ್ಮುತ್ತಿ ರುವ ದೃಶ್ಯಗಳು ಕಂಡುಬರುತ್ತಿದ್ದವು. ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಸಿಲುಕಿದ್ದು, ಮೀನುಗಾರರಿಗೆ ಬಂಪರ್ ಡ್ರಾ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಕಡಲಿನಲ್ಲಿ ಬಿರುಗಾಳಿ ಏಳುತ್ತೆ, ಅಲೆಗಳು ಮೇಲೆ ಕೆಳಗೆ ಆಗಿ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ಬರುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಎಂಬ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.
ಕಳೆದ ಎರಡು ದಿನಗಳಿಂದ ಮಟ್ಟು ಕಡಲತೀರದಲ್ಲಿ ರಾಶಿರಾಶಿಯಾಗಿ ಮೀನುಗಳು ಕಂಡುಬರುತ್ತಿದ್ದು. ಕೈರಂಪಣಿ ಬಲೆಗೆ ಸಿಕ್ಕಿಬಿದ್ದ ಭಾರೀ ಪ್ರಮಾಣದ ಮೀನುಗಳನ್ನು ತೀರಕ್ಕೆ ಎಳೆದು ತರಲು ಮೀನುಗಾರರು ಹರ ಸಾಹಸಪಟ್ಟರು.
ಬಲೆಗೆ ಬಿದ್ದ ಟನ್ಗಟ್ಟಲೆ ಮೀನುಗಳನ್ನು ದಡಕ್ಕೆ ಎಳೆಯಲು ಸಂದರ್ಭ ಕೈರಂಪಣಿಯ ಬಲೆ ಹರಿದು, ಮೀನು ಚೆಲ್ಲಾಪಿಲ್ಲಿಯಾಯಿತ್ತೆನ್ನಲಾಗಿದೆ. ಹೀಗೆ ಬಲೆಯಿಂದ ಹೊರಗೆ ಬಂದು ಒದ್ದಾಡುತ್ತಿದ್ದ ಮೀನುಗಳು ಸಾರ್ವಜನಿಕರ ಪಾಲಾದವು. ಹೀಗೆ ತೀರದಲ್ಲಿ ಮೀನಿಾಗಿ ಜನಸ್ತೋಮವೇ ನೆರೆದಿತ್ತು.
ಬಂಗುಡೆ, ಬೊಳಿಂಜಿರ್, ಕಲ್ಲೂರು, ಬೂತಾಯಿ, ಕೊಂತಿ, ಎಟ್ಟಿಯಂತಹ ಮೀನುಗಳು ಭಾರೀ ಪ್ರಮಾಣದಲ್ಲಿ ಬಲೆಗೆ ಬಿದ್ದಿವೆ. ಒಟ್ಟಾರೆಯಾಗಿ ಇಲ್ಲಿ ಮೀನುಗಾರರ ಬಲೆಗೆ ಸುಮಾರು ಐದು ಟನ್ಗಳಷ್ಟು ಮೀನು ಸಿಕ್ಕಿದೆ. ಹೀಗಾಗಿ ಈ ಪರಿಸರದ ಮತ್ಸ್ಯಪ್ರಿಯರಂತೂ ಫುಲ್ ಖುಷಿಯಾಗಿದ್ದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…