ಉಡುಪಿ

ಕಾಪು ಮಂಥನ್ ಬೀಚ್ ರೆಸಾರ್ಟ್ ಬಳಿ ಮಹಾಸತ್ಸಂಗಕ್ಕೆ ಫೈನಲ್ ಟಚ್ – ಸಂಪೂರ್ಣ ಸಿದ್ದತೆಗೊಂಡ ವೇದಿಕೆ ಆಸನದ ವ್ಯವಸ್ಥೆ :vishwanews24

ಕಾಪು ಮಂಥನ್ ಬೀಚ್ ರೆಸಾರ್ಟ್ ಬಳಿ ಮಹಾಸತ್ಸಂಗಕ್ಕೆ ಫೈನಲ್ ಟಚ್ – ಸಂಪೂರ್ಣ ಸಿದ್ದತೆಗೊಂಡ ವೇದಿಕೆ ಆಸನದ ವ್ಯವಸ್ಥೆ :vishwanews24

ಫೆ. 20 ರಂದು ಸಂಜೆ 4 ರಿಂದ 8 ಗಂಟೆಯವರೆಗೆ ರವಿಶಂಕರ್ ಗುರೂಜಿ ಅವರಿಂದ ಆನಂದ ಲಹರಿ‌ ಮಹಾಸತ್ಸಂಗ

ಕಾಪು : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿರುವ, ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಆರ್ಟ್ ಆಫ್ ಲೀವಿಂಗ್‌ನ ಸಂಸ್ಥಾಪಕ, ಪದ್ಮವಿಭೂಷಣ ಗುರುದೇವ್ ಶ್ರೀ ರವಿಶಂಕರ್ ಗುರೂಜಿ ನೇತೃತ್ವದಲ್ಲಿ ಫೆ. 20 ರಂದು ಸಂಜೆ 4 ಗಂಟೆಯಿಂದ 8 ಗಂಟೆಯವರೆಗೆ ಜ್ಞಾನ, ಧ್ಯಾನ ಹಾಗೂ ಗಾಯನಗಳನ್ನೊಳಗೊಂಡಿರುವ ಆನಂದ ಲಹರಿ – ಸುಮಧುರ ಸಂಜೆ ಕಾರ್ಯಕ್ರಮ ನಡೆಯಲಿದೆ.

ಉಡುಪಿ ಜಿಲ್ಲೆಯ ಕಾಪು ಮಂಥನ್ ಬೀಚ್ ರೆಸಾರ್ಟ್ ಬಳಿಯ ಸಮುದ್ರ ಕಿನಾರೆಯಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ಮನುಷ್ಯನ ಸಂಪೂರ್ಣ ವ್ಯಕ್ತಿತ್ವವನ್ನು ವಿಕಸನಗೊಳಿಸುವಲ್ಲಿ ಸಫಲವಾಗಿರುವ ಜೀವನ ಕಲೆ ಹಾಗೂ ಸುದರ್ಶನ ಕ್ರಿಯಾಯೋಗದ ಆನಂದ ಲಹರಿ ಮಹಾಸತ್ಸಂಗ ಕಾರ್ಯಕ್ರಮಕ್ಕೆ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ.

ಆನಂದ ಲಹರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತರ ಅನುಕೂಲಕ್ಕಾಗಿ ಮೂಳೂರು ಸಾಯಿರಾಧಾ ಹೆರಿಟೇಜ್ ಬಳಿ, ಕಾಪು ಓಶಿಯನ್ ಬೀಚ್ ರೆಸಾರ್ಟ್ ಬಳಿ, ಕಾಪು ಪಡು ಸರಕಾರಿ ಶಾಲೆ ಬಳಿ, ಮಂಥನ್ ಬೀಚ್ ರೆಸಾರ್ಟ್ ಬಳಿಯ ನಾಲ್ಕು ಕಡೆಗಳಲ್ಲಿ ಸೂಕ್ತ ರೀತಿಯ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮ ಸಂಯೋಜಕರಾದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಸಹೋದರರಾದ ಹರೀಶ್ ಪಿ. ಶೆಟ್ಟಿ ಗುರ್ಮೆ, ಸತೀಶ್ ಪಿ. ಶೆಟ್ಟಿ ಗುರ್ಮೆ ನೇತೃತ್ವದಲ್ಲಿ ಎಲ್ಲಾ ಸಮಾಜ ಬಾಂಧವರು ಮತ್ತು ಆರ್ಟ್ ಆಫ್ ಲೀವಿಂಗ್ ಬಳಗದವರ ನೇತೃತ್ವದಲ್ಲಿ ಕಾರ್ಯಕ್ರಮದ ಪೂರ್ವ ತಯಾರಿಗಳು ಪೂರ್ಣಗೊಂಡಿದ್ದು ಮಂಗಳವಾರ ಸುಮಾರು ಹದಿನೈದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ರೆಸಾರ್ಟ್‌ ಸುತ್ತ ಪೊಲೀಸ್ ಸರ್ಪಗಾವಲು
ಸೋಮವಾರ ರಾತ್ರಿ ಮಂಗಳೂರು ಕಾರ್ಯಕ್ರಮ ಮುಗಿಸಿ ಕಾಪು ಮಂಥನ್ ರೆಸಾರ್ಟ್ ಗೆ ಆಗಮಿಸಲಿರುವ ಗುರೂಜಿಯ ಭದ್ರತೆ ದೃಷ್ಟಿಯಿಂದ ರೆಸಾರ್ಟ್ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಬಂದಿಳಿದ ಸಾವಿರಾರು ಡಿವೋಟಿಸ್
ನಾಳೆಯ ಕಾಪುವಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಈಗಾಗಲೇ ದೂರದೂರಿನಿಂದ ಗುರೂಜಿಯ ಭಕ್ತರು- ಅಭಿಮಾನಿಗಳು ನಗರ ಸುತ್ತಲಿನ ಮಠ-ರೂಂಗಳಲ್ಲಿ ತಂಗಿದ್ದಾರೆ.

ತುಳುನಾಡ ಸಂಪ್ರದಾಯದಲ್ಲಿ ಸ್ವಾಗತ
ಗುರೂಜಿ ಆಗಮನದ ಸಮಯದಲ್ಲಿ ತುಳುನಾಡಿನ ಶೈಲಿಯ ಕೊಂಬುವಾದ್ಯ-ಚೆಂಡೆವಾದನ- ನಾಗಸ್ವರ- ವಾದ್ಯಗೋಷ್ಠಿಯಿಂದ ಕಲಾವಿದರು ಸ್ವಾಗತಿಸಲಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

24 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago