ಕಾಪು : 11 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಉಡುಪಿ ಕಾಪುವಿನ ಮಣಿಪುರ ಗ್ರಾಮದಲ್ಲಿ ನಡೆದಿದೆ.
ಸಂದೇಶ್ ಅವರ 11 ವರ್ಷದ ಪುತ್ರಿ ಧನ್ವಿ ಎಂಬುವವಳು ಮೃತಪಟ್ಟಿದ್ದಾರೆ. ಧನ್ವಿ 4ನೇ ತರಗತಿ ಮುಗಿಸಿ ಪ್ರಸ್ತುತ ಶಾಲೆಗೆ ರಜೆಯಾಗಿರುವುದರಿಂದ ಮನೆಯಲ್ಲಿಯೇ ಇದ್ದಳು. ಮೇ.8ರಂದು ಧನ್ವಿಯು ರಾತ್ರಿ ಎಲ್ಲರೊಂದಿಗೆ ಊಟ ಮುಗಿಸಿ ಮಲಗಿಕೊಂಡಿದ್ದು, ಮೇ. 9ರಂದು ಬೆಳಿಗಿನ ಜಾವ 3:00 ಗಂಟೆಯ ಸುಮಾರಿಗೆ ಧನ್ವಿಯು ನಿದ್ರೆಯಿಂದ ಎದ್ದು ವಾಂತಿ ಮಾಡಲು ಆರಂಭಿಸಿದ್ದಾಳೆ. ಬಳಿಕ ಧ್ವನಿಗೆ ನೀರನ್ನು ಕೊಟ್ಟು ಮಲಗಿಸಿದ್ದರೂ ಕೂಡಾ ಆಕೆ ಗಂಟೆಗೊಮ್ಮೆ ಎದ್ದು ವಾಂತಿ ಮಾಡುತ್ತಿದ್ದಳು.
ನಂತರ ಮೆ. 9ರ ಬೆಳಿಗ್ಗೆ 9:00 ಗಂಟೆಯ ಸುಮಾರಿಗೆ ಕ್ಲಿನಿಕ್ಪ್ ಒಂದಕ್ಕೆ ಧ್ವನಿಯನ್ನು ಕರೆದುಕೊಂಡು ಹೋದಲ್ಲಿ ಪರೀಕ್ಷಿಸಿದ ವೈದ್ಯರು ಆಕೆಗೆ ಇಂಜೆಕ್ಷನ್ ಹಾಗೂ ಮದ್ದನ್ನು ನೀಡಿ ಗಂಟೆಗೊಮ್ಮ ಓಆರ್ಎಸ್ ಪೌಡರ್ ಕೊಡುವಂತೆ ಹಾಗೂ ಗಂಜಿ ಊಟ ನೀಡುವಂತೆ ತಿಳಿಸಿದ್ದಾರೆ. ನಂತರ ಮನೆಗೆ ಬಂದ ಧನ್ವಿಯು ಆರೋಗ್ಯವಾಗಿದ್ದು, ಮಧ್ಯಾಹ್ನ 2:00 ಗಂಟೆಯ ಸುಮಾರಿಗೆ ಕೈಕಾಲು ಸೆಲೆದುಕೊಂಡು ಪಿಟ್ಸ್ ಬಂದ ರೀತಿಯಲ್ಲಿ ವರ್ತಿಸುತ್ತಿದ್ದಳು. ಕೂಡಲೇ ಧ್ವನಿಯ ತಂದೆ ಸಂದೇಶ್ ಆಕೆಯನ್ನು ತನ್ನ ರಿಕ್ಷಾದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆಕೆಯನ್ನು ಪರೀಕ್ಷಿಸಿದ ವೈದ್ಯರು ಧನ್ವಿಯು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಧ್ವನಿಯ ತಂದೆ ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಠಾಣೆಯಲ್ಲಿ ಯು.ಡಿ.ಆರ್ ಕ್ರಮಾಂಕ 15/2024 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…